ಚಲೋ ಕೆಲ್ಸ ಮಾಡ್ಯಾನ: ವಿಶ್ವನಾಥ್ ಕುಟುಂಬಸ್ಥರ ವ್ಯಾಖ್ಯಾನ!

Dec 6, 2019, 5:20 PM IST

ಹುಬ್ಬಳ್ಳಿ(ಡಿ.06): ದಿಶಾ ಹತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿರುವ ತೆಲಂಗಾಣ ಪೊಲೀಸರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ರಾಕ್ಷಸರನ್ನು ನರಕಕ್ಕೆ ಕಳುಹಿಸಿದ ಪೊಲೀಸರಿಗೆ ಧನ್ಯವಾದಗಳ ಸುರಿಮಳೆಯೇ ಆಗುತ್ತಿದೆ. ಅದರಂತೆ ಎನ್‌ಕೌಂಟರ್ ನೇತೃತ್ವದ ವಹಿಸಿದ್ದ ಸೈಬರಾಬಾದ್ ಪೊಲೀಸ್ ಆಯುಕ್ತ, ಕನ್ನಡಿಗ ವಿಶ್ವನಾಥ್ ಸಜ್ಜನರ್ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಹತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ ವಿಶ್ವನಾಥ್ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಕುಟುಂಬಸ್ಥರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಆಗಿ ಮಾತನಾಡಿರುವ ವಿಶ್ವನಾಥ್ ಸಜ್ಜನರ್ ಕುಟುಂಬ, ಐಪಿಎಸ್ ಅಧಿಕಾರಿಯ ಬಾಲ್ಯದ ದಿನಗಳನ್ನು ನೆನೆದಿದೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...