ಬೆಂಗಳೂರು ಗಲಭೆ ಹಿಂದೆ ರಾಮ ರಹಸ್ಯ; ಗಲಾಟೆ ಎಬ್ಬಿಸಲು ಮೊದಲೇ ಸ್ಕೆಚ್?

ಬೆಂಗಳೂರು ಗಲಭೆ ಹಿಂದೆ ರಾಮ ರಹಸ್ಯ; ಗಲಾಟೆ ಎಬ್ಬಿಸಲು ಮೊದಲೇ ಸ್ಕೆಚ್?

Published : Aug 14, 2020, 07:03 PM IST

ರಾಜಧಾನಿಯ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆಗೆ ಮುನ್ನ ಮೂರು ಬಾರಿ ನಗರದಲ್ಲಿ ದೊಂಬಿ ಸೃಷ್ಟಿಸಲು ಎಸ್‌ಡಿಪಿಐ ಮುಖಂಡರ ಸಂಚು ರೂಪಿಸಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಆ. 14): ರಾಜಧಾನಿಯ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆಗೆ ಮುನ್ನ ಮೂರು ಬಾರಿ ನಗರದಲ್ಲಿ ದೊಂಬಿ ಸೃಷ್ಟಿಸಲು ಎಸ್‌ಡಿಪಿಐ ಮುಖಂಡರ ಸಂಚು ರೂಪಿಸಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. 

2019 ರ ಅಕ್ಟೋಬರ್‌ನಲ್ಲಿ ರಾಮಜನ್ಮಭೂಮಿ ವಿವಾದ ಸಂಬಂಧ ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಆ ವೇಳೆ ಶಾಂತಿ ಭಂಗಕ್ಕೆ ಎಸ್‌ಡಿಪಿಐ ಮುಖಂಡರು ಸಂಚು ರೂಪಿಸಿದ್ದರು. ಆದರೆ ಪೊಲೀಸರ ಕಠಿಣ ಕ್ರಮಗಳ ಪರಿಣಾಮ ಪೂರ್ವ ಯೋಜಿತ ಸಂಚು ಕಾರ್ಯಗತವಾಗಿಲ್ಲ. ಇದಾದ ನಂತರ ಅದೇ ತಂಡ, ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ಅಭಿಯಾನ ವಿರೋಧಿ ಹೋರಾಟದ ವೇಳೆ ಗಲಭೆ ನಡೆಸಲು ಮತ್ತೊಂದು ಬಾರಿ ಯತ್ನ ನಡೆದಿತ್ತು.

ಇತ್ತೀಚೆಗೆ ಆ.5 ರಂದು ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ವಿರೋಧಿಸಿ ಗಲಭೆ ನಡೆಸಲು ತಂಡ ಯೋಜಿಸಿತ್ತು. ಆಗ ಸೂಕ್ಷ್ಮಪ್ರದೇಶವಾದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂದೋಬಸ್‌್ತ ಕಲ್ಪಿಸಿದ್ದರು. ಹೀಗಾಗಿ ಮೂರನೇ ಬಾರಿಯೂ ಯೋಜನೆ ವಿಫಲವಾಗಿದ್ದರಿಂದ ಮುಜಾಮಿಲ್‌ ಹಾಗೂ ಅಯಾಜ್‌, ಇಸ್ಲಾಂ ಧರ್ಮಗುರು ಮಹಮ್ಮದ್‌ ಪೈಗಂಬರ್‌ ಕುರಿತು ನವೀನ್‌ ಹಾಕಿದ್ದ ವಿವಾದಾತ್ಮಕ ಪೋಸ್ಟ್‌ ಅನ್ನು ದಾಳವಾಗಿ ಬಳಸಿಕೊಂಡಿದ್ದಾರೆæ ಎಂದು ಪೊಲೀಸರು ಸಂಶಯಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?