ಬೆಂಗಳೂರು ಗಲಭೆ ಹಿಂದೆ ರಾಮ ರಹಸ್ಯ; ಗಲಾಟೆ ಎಬ್ಬಿಸಲು ಮೊದಲೇ ಸ್ಕೆಚ್?

ಬೆಂಗಳೂರು ಗಲಭೆ ಹಿಂದೆ ರಾಮ ರಹಸ್ಯ; ಗಲಾಟೆ ಎಬ್ಬಿಸಲು ಮೊದಲೇ ಸ್ಕೆಚ್?

Published : Aug 14, 2020, 07:03 PM IST

ರಾಜಧಾನಿಯ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆಗೆ ಮುನ್ನ ಮೂರು ಬಾರಿ ನಗರದಲ್ಲಿ ದೊಂಬಿ ಸೃಷ್ಟಿಸಲು ಎಸ್‌ಡಿಪಿಐ ಮುಖಂಡರ ಸಂಚು ರೂಪಿಸಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಆ. 14): ರಾಜಧಾನಿಯ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆಗೆ ಮುನ್ನ ಮೂರು ಬಾರಿ ನಗರದಲ್ಲಿ ದೊಂಬಿ ಸೃಷ್ಟಿಸಲು ಎಸ್‌ಡಿಪಿಐ ಮುಖಂಡರ ಸಂಚು ರೂಪಿಸಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. 

2019 ರ ಅಕ್ಟೋಬರ್‌ನಲ್ಲಿ ರಾಮಜನ್ಮಭೂಮಿ ವಿವಾದ ಸಂಬಂಧ ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಆ ವೇಳೆ ಶಾಂತಿ ಭಂಗಕ್ಕೆ ಎಸ್‌ಡಿಪಿಐ ಮುಖಂಡರು ಸಂಚು ರೂಪಿಸಿದ್ದರು. ಆದರೆ ಪೊಲೀಸರ ಕಠಿಣ ಕ್ರಮಗಳ ಪರಿಣಾಮ ಪೂರ್ವ ಯೋಜಿತ ಸಂಚು ಕಾರ್ಯಗತವಾಗಿಲ್ಲ. ಇದಾದ ನಂತರ ಅದೇ ತಂಡ, ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ಅಭಿಯಾನ ವಿರೋಧಿ ಹೋರಾಟದ ವೇಳೆ ಗಲಭೆ ನಡೆಸಲು ಮತ್ತೊಂದು ಬಾರಿ ಯತ್ನ ನಡೆದಿತ್ತು.

ಇತ್ತೀಚೆಗೆ ಆ.5 ರಂದು ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ವಿರೋಧಿಸಿ ಗಲಭೆ ನಡೆಸಲು ತಂಡ ಯೋಜಿಸಿತ್ತು. ಆಗ ಸೂಕ್ಷ್ಮಪ್ರದೇಶವಾದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂದೋಬಸ್‌್ತ ಕಲ್ಪಿಸಿದ್ದರು. ಹೀಗಾಗಿ ಮೂರನೇ ಬಾರಿಯೂ ಯೋಜನೆ ವಿಫಲವಾಗಿದ್ದರಿಂದ ಮುಜಾಮಿಲ್‌ ಹಾಗೂ ಅಯಾಜ್‌, ಇಸ್ಲಾಂ ಧರ್ಮಗುರು ಮಹಮ್ಮದ್‌ ಪೈಗಂಬರ್‌ ಕುರಿತು ನವೀನ್‌ ಹಾಕಿದ್ದ ವಿವಾದಾತ್ಮಕ ಪೋಸ್ಟ್‌ ಅನ್ನು ದಾಳವಾಗಿ ಬಳಸಿಕೊಂಡಿದ್ದಾರೆæ ಎಂದು ಪೊಲೀಸರು ಸಂಶಯಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!