News Hour: ಇಂಡಿಯಾ ವಿಷನ್ 2047, ಇಸ್ಲಾಮಿಕ್ ಆಳ್ವಿಕೆ ಕಡೆಗೆ ಭಾರತ:  ಪಿಎಫ್ಐ ಮಹಾ ಷಡ್ಯಂತ್ರ ಬಯಲು

News Hour: ಇಂಡಿಯಾ ವಿಷನ್ 2047, ಇಸ್ಲಾಮಿಕ್ ಆಳ್ವಿಕೆ ಕಡೆಗೆ ಭಾರತ: ಪಿಎಫ್ಐ ಮಹಾ ಷಡ್ಯಂತ್ರ ಬಯಲು

Published : Jul 14, 2022, 10:52 PM IST

News Hour: ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿಸಿ ಸಂಚು ರೂಪಿಸಿದ್ದ ಶಂಕಿತರನ್ನು ಪೊಲೀಸರು ಬಂಧಿಸಿದ್ದು,  ಪಾಟ್ನಾ ಪ್ರವಾಸದಲ್ಲಿದ್ದ ದಿನ ಪ್ರಧಾನಿಯನ್ನು ಹತ್ಯೆ ಮಾಡಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ

ನವದೆಹಲಿ (ಜು. 14):  ಪ್ರಧಾನಿ ಮೋದಿ (PM Narendra Modi) ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನು (Terrorists) ಪೊಲೀಸರು ಬಂಧಿಸಿದ್ದಾರೆ. ದಾಳಿ ವೇಳೆ 8 ಪುಟಗಳ ದಾಖಲೆಗಳು ಸಿಕ್ಕಿದ್ದು ಅದರಲ್ಲಿ ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಬಿಹಾರದ ಪಾಟ್ನಾದಲ್ಲಿ ಮೋದಿ ಗುರಿಯಾಗಿಸಿ ಸಂಚು ರೂಪಿಸಿದ್ದ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 12ರಂದು ಪ್ರಧಾನಿ ಮೋದಿ ಪಾಟ್ನಾ ಪ್ರವಾಸದಲ್ಲಿದ್ದರು. ಅಂದೇ ಪ್ರಧಾನಿಯನ್ನು ಹತ್ಯೆ ಮಾಡಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ.

ಮೊಹಮ್ಮದ್ ಜಲಾವುದ್ದೀನ್ ಹಾಗೂ ಅಥರ್ ಪರ್ವೇಜ್ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 8 ಪುಟಗಳ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಇದರಲ್ಲಿ ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಜಲಾವುದ್ದೀನ್ ಜಾರ್ಖಂಡ್ನ ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದಾರೆ. ಇವರಿಬ್ಬರೂ ಸಹ ಪಿಎಫ್ಐ ಹಾಗೂ ಎಸ್‌ಡಿಪಿಐನ ಸಕ್ರಿಯ ಸದಸ್ಯರಾಗಿದ್ದರು. 

ಇದನ್ನೂ ನೋಡಿ: ಹೊಸ ಸಂಸತ್ತಿನ ನೆತ್ತಿಯಲ್ಲಿ ಸಿಂಹ ಘರ್ಜನೆ: ಮೂಲ ಲಾಂಛನ ವಿರೂಪಗೊಳಿಸಿತಾ ಮೋದಿ ಸರ್ಕಾರ?

ಅಲ್ಲದೇ ಜಲಾಲುದ್ದೀನ್ ತನ್ನ ಮನೆಯಲ್ಲಿಯೇ ಪಿಎಸ್ಐ ಕಚೇರಿ ಹೊಂದಿದ್ದನು. ಇವರು ಪ್ರಧಾನಿ ಮೋದಿ ಪ್ರವಾಸಕ್ಕೂ ಮುನ್ನ 15 ದಿನಗಳ ಹಿಂದಷ್ಟೇ ನುರಿತ ಉಗ್ರರಿಂದ ಟ್ರೈನಿಂಗ್ ಪಡೆದಿದ್ದರು ಎನ್ನಲಾಗ್ತಿದೆ. ಬಂಧಿತರ ಬಳಿ ಕೆಲವು ಮಹತ್ವದ ದಾಖಲೆಗಳು ಸಿಕ್ಕಿದ್ದು, ಅದರಲ್ಲಿ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಬೇಕೆಂಬುದರ ಬಗ್ಗೆ ಬರೆಯಲಾಗಿದೆ. ಬಿಹಾರ ಪೊಲೀಸರು ನೀಡಿರುವ ಮಾಹಿತಿ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡು  ಎನ್‌ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more