News Hour: ಇಂಡಿಯಾ ವಿಷನ್ 2047, ಇಸ್ಲಾಮಿಕ್ ಆಳ್ವಿಕೆ ಕಡೆಗೆ ಭಾರತ:  ಪಿಎಫ್ಐ ಮಹಾ ಷಡ್ಯಂತ್ರ ಬಯಲು

News Hour: ಇಂಡಿಯಾ ವಿಷನ್ 2047, ಇಸ್ಲಾಮಿಕ್ ಆಳ್ವಿಕೆ ಕಡೆಗೆ ಭಾರತ: ಪಿಎಫ್ಐ ಮಹಾ ಷಡ್ಯಂತ್ರ ಬಯಲು

Published : Jul 14, 2022, 10:52 PM IST

News Hour: ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿಸಿ ಸಂಚು ರೂಪಿಸಿದ್ದ ಶಂಕಿತರನ್ನು ಪೊಲೀಸರು ಬಂಧಿಸಿದ್ದು,  ಪಾಟ್ನಾ ಪ್ರವಾಸದಲ್ಲಿದ್ದ ದಿನ ಪ್ರಧಾನಿಯನ್ನು ಹತ್ಯೆ ಮಾಡಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ

ನವದೆಹಲಿ (ಜು. 14):  ಪ್ರಧಾನಿ ಮೋದಿ (PM Narendra Modi) ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನು (Terrorists) ಪೊಲೀಸರು ಬಂಧಿಸಿದ್ದಾರೆ. ದಾಳಿ ವೇಳೆ 8 ಪುಟಗಳ ದಾಖಲೆಗಳು ಸಿಕ್ಕಿದ್ದು ಅದರಲ್ಲಿ ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಬಿಹಾರದ ಪಾಟ್ನಾದಲ್ಲಿ ಮೋದಿ ಗುರಿಯಾಗಿಸಿ ಸಂಚು ರೂಪಿಸಿದ್ದ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 12ರಂದು ಪ್ರಧಾನಿ ಮೋದಿ ಪಾಟ್ನಾ ಪ್ರವಾಸದಲ್ಲಿದ್ದರು. ಅಂದೇ ಪ್ರಧಾನಿಯನ್ನು ಹತ್ಯೆ ಮಾಡಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ.

ಮೊಹಮ್ಮದ್ ಜಲಾವುದ್ದೀನ್ ಹಾಗೂ ಅಥರ್ ಪರ್ವೇಜ್ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 8 ಪುಟಗಳ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಇದರಲ್ಲಿ ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಜಲಾವುದ್ದೀನ್ ಜಾರ್ಖಂಡ್ನ ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದಾರೆ. ಇವರಿಬ್ಬರೂ ಸಹ ಪಿಎಫ್ಐ ಹಾಗೂ ಎಸ್‌ಡಿಪಿಐನ ಸಕ್ರಿಯ ಸದಸ್ಯರಾಗಿದ್ದರು. 

ಇದನ್ನೂ ನೋಡಿ: ಹೊಸ ಸಂಸತ್ತಿನ ನೆತ್ತಿಯಲ್ಲಿ ಸಿಂಹ ಘರ್ಜನೆ: ಮೂಲ ಲಾಂಛನ ವಿರೂಪಗೊಳಿಸಿತಾ ಮೋದಿ ಸರ್ಕಾರ?

ಅಲ್ಲದೇ ಜಲಾಲುದ್ದೀನ್ ತನ್ನ ಮನೆಯಲ್ಲಿಯೇ ಪಿಎಸ್ಐ ಕಚೇರಿ ಹೊಂದಿದ್ದನು. ಇವರು ಪ್ರಧಾನಿ ಮೋದಿ ಪ್ರವಾಸಕ್ಕೂ ಮುನ್ನ 15 ದಿನಗಳ ಹಿಂದಷ್ಟೇ ನುರಿತ ಉಗ್ರರಿಂದ ಟ್ರೈನಿಂಗ್ ಪಡೆದಿದ್ದರು ಎನ್ನಲಾಗ್ತಿದೆ. ಬಂಧಿತರ ಬಳಿ ಕೆಲವು ಮಹತ್ವದ ದಾಖಲೆಗಳು ಸಿಕ್ಕಿದ್ದು, ಅದರಲ್ಲಿ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಬೇಕೆಂಬುದರ ಬಗ್ಗೆ ಬರೆಯಲಾಗಿದೆ. ಬಿಹಾರ ಪೊಲೀಸರು ನೀಡಿರುವ ಮಾಹಿತಿ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡು  ಎನ್‌ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more