News Hour: ಇಂಡಿಯಾ ವಿಷನ್ 2047, ಇಸ್ಲಾಮಿಕ್ ಆಳ್ವಿಕೆ ಕಡೆಗೆ ಭಾರತ:  ಪಿಎಫ್ಐ ಮಹಾ ಷಡ್ಯಂತ್ರ ಬಯಲು

News Hour: ಇಂಡಿಯಾ ವಿಷನ್ 2047, ಇಸ್ಲಾಮಿಕ್ ಆಳ್ವಿಕೆ ಕಡೆಗೆ ಭಾರತ: ಪಿಎಫ್ಐ ಮಹಾ ಷಡ್ಯಂತ್ರ ಬಯಲು

Published : Jul 14, 2022, 10:52 PM IST

News Hour: ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿಸಿ ಸಂಚು ರೂಪಿಸಿದ್ದ ಶಂಕಿತರನ್ನು ಪೊಲೀಸರು ಬಂಧಿಸಿದ್ದು,  ಪಾಟ್ನಾ ಪ್ರವಾಸದಲ್ಲಿದ್ದ ದಿನ ಪ್ರಧಾನಿಯನ್ನು ಹತ್ಯೆ ಮಾಡಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ

ನವದೆಹಲಿ (ಜು. 14):  ಪ್ರಧಾನಿ ಮೋದಿ (PM Narendra Modi) ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನು (Terrorists) ಪೊಲೀಸರು ಬಂಧಿಸಿದ್ದಾರೆ. ದಾಳಿ ವೇಳೆ 8 ಪುಟಗಳ ದಾಖಲೆಗಳು ಸಿಕ್ಕಿದ್ದು ಅದರಲ್ಲಿ ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಬಿಹಾರದ ಪಾಟ್ನಾದಲ್ಲಿ ಮೋದಿ ಗುರಿಯಾಗಿಸಿ ಸಂಚು ರೂಪಿಸಿದ್ದ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 12ರಂದು ಪ್ರಧಾನಿ ಮೋದಿ ಪಾಟ್ನಾ ಪ್ರವಾಸದಲ್ಲಿದ್ದರು. ಅಂದೇ ಪ್ರಧಾನಿಯನ್ನು ಹತ್ಯೆ ಮಾಡಲು ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ.

ಮೊಹಮ್ಮದ್ ಜಲಾವುದ್ದೀನ್ ಹಾಗೂ ಅಥರ್ ಪರ್ವೇಜ್ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 8 ಪುಟಗಳ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಇದರಲ್ಲಿ ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಜಲಾವುದ್ದೀನ್ ಜಾರ್ಖಂಡ್ನ ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದಾರೆ. ಇವರಿಬ್ಬರೂ ಸಹ ಪಿಎಫ್ಐ ಹಾಗೂ ಎಸ್‌ಡಿಪಿಐನ ಸಕ್ರಿಯ ಸದಸ್ಯರಾಗಿದ್ದರು. 

ಇದನ್ನೂ ನೋಡಿ: ಹೊಸ ಸಂಸತ್ತಿನ ನೆತ್ತಿಯಲ್ಲಿ ಸಿಂಹ ಘರ್ಜನೆ: ಮೂಲ ಲಾಂಛನ ವಿರೂಪಗೊಳಿಸಿತಾ ಮೋದಿ ಸರ್ಕಾರ?

ಅಲ್ಲದೇ ಜಲಾಲುದ್ದೀನ್ ತನ್ನ ಮನೆಯಲ್ಲಿಯೇ ಪಿಎಸ್ಐ ಕಚೇರಿ ಹೊಂದಿದ್ದನು. ಇವರು ಪ್ರಧಾನಿ ಮೋದಿ ಪ್ರವಾಸಕ್ಕೂ ಮುನ್ನ 15 ದಿನಗಳ ಹಿಂದಷ್ಟೇ ನುರಿತ ಉಗ್ರರಿಂದ ಟ್ರೈನಿಂಗ್ ಪಡೆದಿದ್ದರು ಎನ್ನಲಾಗ್ತಿದೆ. ಬಂಧಿತರ ಬಳಿ ಕೆಲವು ಮಹತ್ವದ ದಾಖಲೆಗಳು ಸಿಕ್ಕಿದ್ದು, ಅದರಲ್ಲಿ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಬೇಕೆಂಬುದರ ಬಗ್ಗೆ ಬರೆಯಲಾಗಿದೆ. ಬಿಹಾರ ಪೊಲೀಸರು ನೀಡಿರುವ ಮಾಹಿತಿ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡು  ಎನ್‌ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more