ಅದು ಸಂಸದನ ಮನೆ ಅಲ್ಲ..ಕೋಟಿ ನೋಟಿನ ಕೋಟೆ..! ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಕಾಂಗ್ರೆಸ್ ಮುಖಂಡ..?

ಅದು ಸಂಸದನ ಮನೆ ಅಲ್ಲ..ಕೋಟಿ ನೋಟಿನ ಕೋಟೆ..! ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಕಾಂಗ್ರೆಸ್ ಮುಖಂಡ..?

Published : Dec 10, 2023, 02:25 PM IST

ದುಡ್ಡು ಎಣಿಸೋಕಾಗದೆ ಮಿಷಿನ್‌ ಕೆಟ್ಟೋಯ್ತು!
ಕಾಸಿನ ಕೋಟೆ ನೋಡಿ ಅಧಿಕಾರಿಗಳೇ ಸುಸ್ತು!
ಇದು ಸಂಸದನ ಮನೆ ಅಲ್ಲ,ನೋಟಿನ ಕೋಟೆ!

ಅದು ಸಂಸದನ ಮನೆ ಅಲ್ಲ. ಕೋಟಿ ಕೋಟಿ ನೋಟಿನ ಕೋಟೆ. ಆ ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಕಾಂಗ್ರೆಸ್(Congress) ಮುಖಂಡ ಧೀರಜ್ ಸಾಹು..? ದುಡ್ಡು ಎಣಿಸಿ ಅಧಿಕಾರಿಗಳೇ ಸುಸ್ತಾದ್ರು. ನೋಟಿನ ಮೆಷಿನ್ನೇ ಢಮಾರ್ ಆಯ್ತು. ಆದ್ರೂ ಮುಗಿದಿಲ್ಲ ದುಡ್ಡು ಎಣಿಸೋ ಕೆಲಸ. ಧೀರಜ್ ಸಾಹು(Dheeraj Sahu) ಒಡಿಶಾದ (Odisha) ಕಾಂಗ್ರೆಸ್ ಸಂಸದ. ಅಕ್ರಮ ಆಸ್ತಿಗಳಿಕೆ ಅನುಮಾನದ ಮೇಲೆ ಐಟಿ ಪಡೆ ಸಾಹುಗೆ ಸಂಬಂಧಪಟ್ಟ ಹತ್ತಾರು ಕಡೆ ದಾಳಿ ನಡೆಸಿತ್ತು. ದಾಳಿ ನಡೀವಾಗ ಇಂಥದ್ದೊಂದು ಆಘಾತಕಾರಿ, ಅಚ್ಚರಿ ಬೇಟೆ ನಡೆಯಲಿದೆ ಅನ್ನೋದು ಅವರಿಗೂ ಗೊತ್ತಿರ್ಲಿಲ್ವೋ ಏನೋ. ಆದ್ರೆ, ಧೀರಜ್ ಸಾಹು ಹಾಗೂ ಅವರ ಆಪ್ತರ ಮನೆಗಳ ಮೇಲೆ ರೈಡ್ ನಡೆದಾಗ, ನೋಟಿನ ದೇವತೆ ಅವರ ಮನೆಗಳಲ್ಲಿ ತಾಂಡವ ಆಡ್ತಾ ಇದ್ಲು. ಒಂದಲ್ಲಾ ಎರಡಲ್ಲಾ, ಬರೋಬ್ಬರಿ ನಾಲ್ಕು ದಿನಗಳಿಂದಲೂ ನಡೀತಿರೋ ರೈಡ್ ಇದು. ಒಡಿಶಾ, ಜಾರ್ಖಂಡ್, ದೆಹಲಿ(Delhi) ಈ ಮೂರೂ ರಾಜ್ಯಗಳಲ್ಲಿ, ಧಿರಜ್ ಸಾಹು ನಿಗೂಢ ವ್ಯವಹಾರ ನಡೆಸಿದ್ದಾರೆ ಅನ್ನೋ ಮಾಹಿತಿ ಇದೆ. ಅದರ ಆಧಾರದ ಮೇಲೇ ಹೆಚ್ಚುಕಮ್ಮಿ ಒಂದು ಡಜನ್ ಜಾಗಗಳಲ್ಲಿ ಶೋಧ ಕಾರ್ಯ ನಡೀತಿದೆ. ಈ ಶೋಧ ಇನ್ನೂ ಅದೆಷ್ಟು ಕಾಲ ನಡೆಯುತ್ತೋ ಗೊತ್ತಿಲ್ಲ. ಅದರಿಂದ ಮತ್ತೆಷ್ಟು ಹಣ ಸಿಗುತ್ತೋ ಹೇಳೋಕ್ಕಾಗಲ್ಲ. ಆದ್ರೆ ಇದುವರೆಗು ಸಿಕ್ಕಿರೋ ದುಡ್ಡನ್ನ ಲೆಕ್ಕ ಮಾಡಿ ಹೇಳೋಕೇ ಇನ್ನೂ ಒಂದೆರಡು ದಿನ ಬೇಕಾಗುತ್ತೆ ಅಂತಿದ್ದಾರೆ ಅಧಿಕಾರಿಗಳು. ಈ ಪರಿ ಲೆಕ್ಕಕ್ಕೆ ಸಿಗದ ದುಡ್ಡು ಪತ್ತೆಯಾಗಿರೋದು, ಕಾಂಗ್ರೆಸ್ ಶಾಸಕರ ಮನೆಯಲ್ಲಿ. 300 ಕೋಟಿಗೂ ಅಧಿಕ ಅಕ್ರಮ ಹಣ ಪತ್ತೆಯಾಗಿದೆ. ಇನ್ನೂ 10 ಕೋಣೆಗಳು ಮಾತ್ರ ತೆರೆಯಲ್ಪಟ್ಟಿವೆ, ಇನ್ನೂ 10 ಬಾಕಿ ಇದೆ. ಈ ಹಣವೆಲ್ಲಾ ಜಾರ್ಖಂಡ್, ಛತ್ತಿಸ್‌ಗಢ್ ಲೂಟಿ ಮಾಡಿ ಸಂಗ್ರಹಿಸಿರೋ ದುಡ್ಡು. ಈ ಬಗ್ಗೆ ಇಡಿ ತನಿಖೆ ನಡೆಸಲಿ. ಆಗ ಗಾಂಧಿ ಪರಿವಾರದ ನಂಟು ಬೆಳಕಿದೆ ಬರುತ್ತೆ. ಈ ಹಣವನ್ನ ಕಾಂಗ್ರೆಸ್ ಚುನಾವಣೆಗೆ ಅಂತ ಬಚ್ಚಿಟ್ಟಿತ್ತು. ತನಿಖೆ ನಡೆದರೆ ಕಾಂಗ್ರೆಸ್ ಬಂಡವಾಳ ಬಯಲಾಗುತ್ತೆ. ಈ 200 ಕೋಟಿ 2000 ಕೋಟಿ ದಾಟಿದರೂ ಆಶ್ಚರ್ಯವಿಲ್ಲ.

ಇದನ್ನೂ ವೀಕ್ಷಿಸಿ:  10 ಎಕರೆ ಜಮೀನು ಕೊಲೆಗೆ ಕಾರಣವಾಯ್ತಾ..? ನಾಯ್ಕೋಡಿ VS ಪಾಟೀಲ್ ದ್ವೇಷದ ಕಿಚ್ಚು..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more