ಅದು ಸಂಸದನ ಮನೆ ಅಲ್ಲ..ಕೋಟಿ ನೋಟಿನ ಕೋಟೆ..! ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಕಾಂಗ್ರೆಸ್ ಮುಖಂಡ..?

ಅದು ಸಂಸದನ ಮನೆ ಅಲ್ಲ..ಕೋಟಿ ನೋಟಿನ ಕೋಟೆ..! ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಕಾಂಗ್ರೆಸ್ ಮುಖಂಡ..?

Published : Dec 10, 2023, 02:25 PM IST

ದುಡ್ಡು ಎಣಿಸೋಕಾಗದೆ ಮಿಷಿನ್‌ ಕೆಟ್ಟೋಯ್ತು!
ಕಾಸಿನ ಕೋಟೆ ನೋಡಿ ಅಧಿಕಾರಿಗಳೇ ಸುಸ್ತು!
ಇದು ಸಂಸದನ ಮನೆ ಅಲ್ಲ,ನೋಟಿನ ಕೋಟೆ!

ಅದು ಸಂಸದನ ಮನೆ ಅಲ್ಲ. ಕೋಟಿ ಕೋಟಿ ನೋಟಿನ ಕೋಟೆ. ಆ ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಕಾಂಗ್ರೆಸ್(Congress) ಮುಖಂಡ ಧೀರಜ್ ಸಾಹು..? ದುಡ್ಡು ಎಣಿಸಿ ಅಧಿಕಾರಿಗಳೇ ಸುಸ್ತಾದ್ರು. ನೋಟಿನ ಮೆಷಿನ್ನೇ ಢಮಾರ್ ಆಯ್ತು. ಆದ್ರೂ ಮುಗಿದಿಲ್ಲ ದುಡ್ಡು ಎಣಿಸೋ ಕೆಲಸ. ಧೀರಜ್ ಸಾಹು(Dheeraj Sahu) ಒಡಿಶಾದ (Odisha) ಕಾಂಗ್ರೆಸ್ ಸಂಸದ. ಅಕ್ರಮ ಆಸ್ತಿಗಳಿಕೆ ಅನುಮಾನದ ಮೇಲೆ ಐಟಿ ಪಡೆ ಸಾಹುಗೆ ಸಂಬಂಧಪಟ್ಟ ಹತ್ತಾರು ಕಡೆ ದಾಳಿ ನಡೆಸಿತ್ತು. ದಾಳಿ ನಡೀವಾಗ ಇಂಥದ್ದೊಂದು ಆಘಾತಕಾರಿ, ಅಚ್ಚರಿ ಬೇಟೆ ನಡೆಯಲಿದೆ ಅನ್ನೋದು ಅವರಿಗೂ ಗೊತ್ತಿರ್ಲಿಲ್ವೋ ಏನೋ. ಆದ್ರೆ, ಧೀರಜ್ ಸಾಹು ಹಾಗೂ ಅವರ ಆಪ್ತರ ಮನೆಗಳ ಮೇಲೆ ರೈಡ್ ನಡೆದಾಗ, ನೋಟಿನ ದೇವತೆ ಅವರ ಮನೆಗಳಲ್ಲಿ ತಾಂಡವ ಆಡ್ತಾ ಇದ್ಲು. ಒಂದಲ್ಲಾ ಎರಡಲ್ಲಾ, ಬರೋಬ್ಬರಿ ನಾಲ್ಕು ದಿನಗಳಿಂದಲೂ ನಡೀತಿರೋ ರೈಡ್ ಇದು. ಒಡಿಶಾ, ಜಾರ್ಖಂಡ್, ದೆಹಲಿ(Delhi) ಈ ಮೂರೂ ರಾಜ್ಯಗಳಲ್ಲಿ, ಧಿರಜ್ ಸಾಹು ನಿಗೂಢ ವ್ಯವಹಾರ ನಡೆಸಿದ್ದಾರೆ ಅನ್ನೋ ಮಾಹಿತಿ ಇದೆ. ಅದರ ಆಧಾರದ ಮೇಲೇ ಹೆಚ್ಚುಕಮ್ಮಿ ಒಂದು ಡಜನ್ ಜಾಗಗಳಲ್ಲಿ ಶೋಧ ಕಾರ್ಯ ನಡೀತಿದೆ. ಈ ಶೋಧ ಇನ್ನೂ ಅದೆಷ್ಟು ಕಾಲ ನಡೆಯುತ್ತೋ ಗೊತ್ತಿಲ್ಲ. ಅದರಿಂದ ಮತ್ತೆಷ್ಟು ಹಣ ಸಿಗುತ್ತೋ ಹೇಳೋಕ್ಕಾಗಲ್ಲ. ಆದ್ರೆ ಇದುವರೆಗು ಸಿಕ್ಕಿರೋ ದುಡ್ಡನ್ನ ಲೆಕ್ಕ ಮಾಡಿ ಹೇಳೋಕೇ ಇನ್ನೂ ಒಂದೆರಡು ದಿನ ಬೇಕಾಗುತ್ತೆ ಅಂತಿದ್ದಾರೆ ಅಧಿಕಾರಿಗಳು. ಈ ಪರಿ ಲೆಕ್ಕಕ್ಕೆ ಸಿಗದ ದುಡ್ಡು ಪತ್ತೆಯಾಗಿರೋದು, ಕಾಂಗ್ರೆಸ್ ಶಾಸಕರ ಮನೆಯಲ್ಲಿ. 300 ಕೋಟಿಗೂ ಅಧಿಕ ಅಕ್ರಮ ಹಣ ಪತ್ತೆಯಾಗಿದೆ. ಇನ್ನೂ 10 ಕೋಣೆಗಳು ಮಾತ್ರ ತೆರೆಯಲ್ಪಟ್ಟಿವೆ, ಇನ್ನೂ 10 ಬಾಕಿ ಇದೆ. ಈ ಹಣವೆಲ್ಲಾ ಜಾರ್ಖಂಡ್, ಛತ್ತಿಸ್‌ಗಢ್ ಲೂಟಿ ಮಾಡಿ ಸಂಗ್ರಹಿಸಿರೋ ದುಡ್ಡು. ಈ ಬಗ್ಗೆ ಇಡಿ ತನಿಖೆ ನಡೆಸಲಿ. ಆಗ ಗಾಂಧಿ ಪರಿವಾರದ ನಂಟು ಬೆಳಕಿದೆ ಬರುತ್ತೆ. ಈ ಹಣವನ್ನ ಕಾಂಗ್ರೆಸ್ ಚುನಾವಣೆಗೆ ಅಂತ ಬಚ್ಚಿಟ್ಟಿತ್ತು. ತನಿಖೆ ನಡೆದರೆ ಕಾಂಗ್ರೆಸ್ ಬಂಡವಾಳ ಬಯಲಾಗುತ್ತೆ. ಈ 200 ಕೋಟಿ 2000 ಕೋಟಿ ದಾಟಿದರೂ ಆಶ್ಚರ್ಯವಿಲ್ಲ.

ಇದನ್ನೂ ವೀಕ್ಷಿಸಿ:  10 ಎಕರೆ ಜಮೀನು ಕೊಲೆಗೆ ಕಾರಣವಾಯ್ತಾ..? ನಾಯ್ಕೋಡಿ VS ಪಾಟೀಲ್ ದ್ವೇಷದ ಕಿಚ್ಚು..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more