ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್!

ರಾಜ್ಯಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್!

Published : Feb 17, 2021, 12:05 PM ISTUpdated : Feb 17, 2021, 12:08 PM IST

ರಾಜಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್ ನೀಡಿದೆ. ಬೆಂಗಳೂರು, ಮಂಗಳೂರು, ತುಮಕೂರು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

 

ಬೆಂಗಳೂರು(ಫೆ.17): ರಾಜಾದ್ಯಂತ ಮೆಡಿಕಲ್ ಕಾಲೇಜುಗಳಿಗೆ ಐಟಿ ಶಾಕ್ ನೀಡಿದೆ. ಬೆಂಗಳೂರು, ಮಂಗಳೂರು, ತುಮಕೂರು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ರಾಜಧಾನಿ ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಮೆಡಿಕಲ್ ಕಾಲೇಜು, ಪ್ರತಿಷ್ಠಿತ ಬಿಜಿಎಸ್ ಶಿಕ್ಷಣ ಸಂಸ್ಥೆ,  ತುಮಕೂರಿನ ಶ್ರೀದೇವಿ ಕಾಲೇಜು, ಮಂಗಳೂರಿನ ಖ್ಯಾತ ಉದ್ಯಮಿ ಬಿ ಆರ್ ಶೆಟ್ಟಿ ಸೇರಿದಂತೆ ಉದ್ಯಮಿಗಳ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳ ಮೇಲೆ ಐಟಿ ಇಲಾಖೆ ಬುಧವಾರ ದಾಳಿ ನಡೆಸಿದೆ.

ರಾಜ್ಯದಲ್ಲಿ ಮತ್ತೆ ಐಟಿ ಬೇಟೆ: ಖ್ಯಾತ ಉದ್ಯಮಿ ಮನೆ ಮೇಲೆ ದಾಳಿ

ಮಂಗಳೂರಿನ ವಿವಿಧ ಉದ್ಯಮಿಗಳ ಆಸ್ಪತ್ರೆ, ಮನೆ, ಕಚೇರಿಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖ್ಯಾತ ಉದ್ಯಮಿ ಎ ಜೆ ಶೆಟ್ಟಿ ಅವರ ಬೆಂದೂರ್ ವೆಲ್ ನಲ್ಲಿರುವ ನಿವಾಸದ ಮೇಲೆ, ಮಂಗಳೂರಿನಲ್ಲಿರುವ ಎ ಜೆ ಆಸ್ಪತ್ರೆ, ಯೆನೆಪೋಯ ಆಸ್ಪತ್ರೆ ಮೇಲೆ ದಾಳಿ ನಡೆದಿದೆ.

ಅಕ್ರಮ ಆಸ್ತಿ ಸಂಪಾದನೆ, ಕಪ್ಪು ಹಣ ಸಂಗ್ರಹದ ಆರೋಪವಿದ್ದು, ವೈದ್ಯಕೀಯ ಕಾಲೇಜುಗಳಲ್ಲಿ ಸೀಟಿಗಾಗಿ ಲಕ್ಷ ಲಕ್ಷ ಸುಲಿಗೆ ನಡೆಸುತ್ತಿದ್ದಾರೆ, ಆಸ್ಪತ್ರೆಗಳಲ್ಲಿ ರೋಗಿಗಳಿಂದ ಚಿಕಿತ್ಸೆ ಹೆಸರಿನಲ್ಲಿ ಲಕ್ಷಗಟ್ಟಲೆ ಹಣ ಪೀಕಲಾಗುತ್ತಿದ್ದು ಸರಿಯಾದ ಆದಾಯ ತೆರಿಗೆ ವಿವರ ನೀಡುತ್ತಿಲ್ಲ, ತೆರಿಗೆ ಕಟ್ಟುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು ಈ ಸಂಬಂಧ ದಾಳಿ ನಡೆದಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್