News Hour: ಸೋಮವಾರ ಸುಪ್ರೀಂನಲ್ಲಿ ಆರ್ಟಿಕಲ್ 370 ಭವಿಷ್ಯ!

News Hour: ಸೋಮವಾರ ಸುಪ್ರೀಂನಲ್ಲಿ ಆರ್ಟಿಕಲ್ 370 ಭವಿಷ್ಯ!

Published : Dec 09, 2023, 10:44 PM IST

ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ರದ್ದು ಸರಿಯೇ ಅಥವಾ ತಪ್ಪೇ ಎಂಬುದಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಉತ್ತರ ನೀಡಲಿದೆ..  ಸುಪ್ರೀಂನ ಪಂಚ ಸದಸ್ಯರ ಪೀಠ ಸತತ 16 ದಿನಗಳ ವಾದ- ಪ್ರತಿವಾದಗಳನ್ನ ಆಲಿಸಿದ್ದು... ಡಿಸೆಂಬರ್ 11ಕ್ಕೆ ತನ್ನ ತೀರ್ಪನ್ನ ಕಾದಿರಿಸಿದೆ. 
 

ಬೆಂಗಳೂರು (ಡಿ.9): ಆರ್ಟಿಕಲ್ 370 ರದ್ದು ಮಾಡುತ್ತೇವೆ ಎನ್ನುತ್ತಲೇ ಅಧಿಕಾರ ಹಿಡಿದಿದ್ದ ಬಿಜೆಪಿ.. ತನ್ನ ಎರಡನೇ ಅವಧಿಯಲ್ಲಿ ವಿವಾದಿತ ಕಾಯ್ದೆಗೆ ಇತಿಶ್ರೀ ಹಾಡಿತ್ತು.. ಆಗಸ್ಟ್ 5, 2019ರಂದು ರಾಜ್ಯಸಭೆಯಲ್ಲಿ ನಿರ್ಧಾರ ಪ್ರಕಟಿಸಿದ ಅಮಿತ್ ಶಾ, ಆರ್ಟಿಕಲ್ 370 ರದ್ದು ಮಾಡುವ ಬಿಲ್ ಮಂಡಿಸಿದ್ದರು. ಕಣಿವೆ ರಾಜ್ಯವನ್ನ 2 ಭಾಗಗಳನ್ನಾಗಿ ವಿಂಗಡಿಸಿದ ಕೇಂದ್ರ ಸರ್ಕಾರ. ಲಡಾಖ್ ಭಾಗವನ್ನು ಚುನಾವಣಾ ರಹಿತ ಕೇಂದ್ರಾಡಳಿತ ಪ್ರದೇಶ ಹಾಗೂ ಜಮ್ಮು ಕಾಶ್ಮೀರವನ್ನ ವಿಧಾನಸಭೆ ಒಳಗೊಂಡ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿತು. 

ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಶ್ಮೀರ ನಾಯಕರು., ಆರ್ಟಿಕಲ್ 370 ರದ್ದು ಸಂವಿಧಾನದ ವಿರುದ್ಧವಾಗಿದೆ ಎನ್ನುತ್ತಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.. ನ್ಯಾಷನಲ್ ಕಾನ್ಫರೆನ್ಸ್ ಸಂಸದ ಮೊಹಮ್ಮದ್ ಅಕ್ಬರ್ ಲೋನ್ ಹಾಗೂ ಇನ್ನಿತರು ಸಲ್ಲಿಸಿದ್ದ ಅರ್ಜಿಗಳನ್ನ ಒಟ್ಟಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಸತತ 16 ದಿನ, 3606 ನಿಮಿಷ ವಾದ-ಪ್ರತಿವಾದ ಆಲಿಸಿತ್ತು.

ಡಿ.11ಕ್ಕೆ ಜಮ್ಮು ಕಾಶ್ಮೀರದ ಆರ್ಟಿಕಲ್ 370 ರದ್ದು ಭವಿಷ್ಯ, ತೀರ್ಪು ಪ್ರಕಟಿಸಲಿದೆ ಸುಪ್ರೀಂ ಕೋರ್ಟ್!

ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪಂಚಸದಸ್ಯ ಪೀಠದಲ್ಲಿ ನ್ಯಾಯಾಧೀಶರಾದ ಸಂಜೀವ್ ಖನ್ನಾ, ಎಸ್.ಕೆ ಕೌಲ್, ಬಿ.ಆರ್ ಗವಾಯಿ, ಜೆ.ಸೂರ್ಯ ಕಾಂತ್ರಿದ್ದ ಸೋಮವಾರ ಆರ್ಟಿಕಲ್ 370 ಕುರಿತಂತೆ ಐವರು ನ್ಯಾಯಾಧೀಶರು ಪ್ರತ್ಯೇಕ ತೀರ್ಪು ನೀಡಲಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more