ಕನ್ನಡದ ಏಕೈಕ ಪ್ರಧಾನಿ ದೇವೇಗೌಡರದ್ದು ಗಂಡೆದೆಯ ಗುಂಡಿಗೆ; ಉಗ್ರರ ಅಗ್ನಿಕುಂಡಕ್ಕೆ ಕಾಲಿಟ್ಟಿದ್ದ ದೊಡ್ಡಗೌಡ್ರು!

ಕನ್ನಡದ ಏಕೈಕ ಪ್ರಧಾನಿ ದೇವೇಗೌಡರದ್ದು ಗಂಡೆದೆಯ ಗುಂಡಿಗೆ; ಉಗ್ರರ ಅಗ್ನಿಕುಂಡಕ್ಕೆ ಕಾಲಿಟ್ಟಿದ್ದ ದೊಡ್ಡಗೌಡ್ರು!

Published : Sep 01, 2024, 01:45 PM IST

ದೇಶದ ಏಕೈಕ ಕನ್ನಡಿಗ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ಉಗ್ರರ ಬೆಂಕಿ ಚೆಂಡಿನಂತಿದ್ದ ಕಾಶ್ಮೀರಕ್ಕೆ ಭೇಟಿ ನೀಡುವ ಮೂಲಕ ಗಟ್ಟಿ ಗುಂಡಿಗೆಯನ್ನು ಪ್ರದರ್ಶನ ಮಾಡಿದ್ದರು.

ದೇಶದ ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಹೆಚ್.ಡಿ. ದೇವೇಗೌಡರದ್ದು ನಿಜಕ್ಕೂ ಗಂಡೆದೆಯ ಗುಂಡಿಗೆ ಎಂದೇ ಹೇಳಬಹುದು. ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿಯಾಗಿದ್ದಾಗ ಉಗ್ರರ ಉಪಟಳದಿಂದಾಗಿ ಅಗ್ನಿಕುಂಡದಂತಿದ್ದ ಕಾಶ್ಮೀರಕ್ಕೆ ಎರೆಡೆರಡು ಬಾರಿ ಭೇಟಿ ನೀಡಿ ಕ್ರಾಂತಿ ಚರಿತ್ರೆಯನ್ನೇ ಸೃಷ್ಟಿಸಿದ್ದಾರೆ. ಎಲ್ಲ ಪ್ರಧಾನಿಗಳು ಕಾಶ್ಮೀರಕ್ಕೆ ಹೋದರೆ ಜೀವಕ್ಕೆ ಉಳಿಗಾಲವಿಲ್ಲ ಎಂಬ ಭಯದಿಂದ ಹಿಂಜರಿಯುತ್ತಿದ್ದ ಭಯದ ವಾತಾವರಣ ಇದ್ದಾಗ. ಅಲ್ಲಿಗೆ ಭೇಟಿ ನೀಡಿದ್ದ ದೇವೇಗೌಡರು ಹೆಚ್ಚು ಭಧ್ರತೆಯನ್ನೂ ಪಡೆಯದೇ ಓಪೆನ್ ಜೀಪಿನಲ್ಲಿ ಕಾಶ್ಮೀರದಲ್ಲಿ ಸುತ್ತಾಡಿದ್ದಾರೆ. ಇದನ್ನು ನೋಡಿದ ದೇಶದ ಜನರು ನಿಜಕ್ಕೂ ದೇವೇಗೌಡರದ್ದು ಗಂಡೆದೆಯ ಗುಂಡಿಗೆಯೇ ಇರಬೇಕು ಎಂದು ಕೊಂಡಾಡಿದ್ದರು.

ಕಳೆದ 27 ವರ್ಷಗಳ ಹಿಂದೆ ಪ್ರಧಾನಮಂತ್ರಿ ಆಗಿದ್ದಾಗ ಕಾಶ್ಮೀರ ಕಣಿವೆಗೆ 2 ಬಾರಿ ಭೇಟಿ ನೀಡಿದ್ದ ದೇವೇಗೌಡರು ಈಗ ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ 92ನೇ ವಯಸ್ಸಿನಲ್ಲಿ ಮತ್ತೆ ಕಣಿವೆ ರಾಜ್ಯಕ್ಕೆ ಹೋಗಿದ್ದಾರೆ. ಶಂಕರಾಚಾರ್ಯ ಬೆಟ್ಟವನ್ನೇರಿ ಶಿವನ ದರ್ಶನ ಪಡೆದಿದ್ದಾರೆ. ಅದು ತಮ್ಮ ಜೀವಮಾನದ ಕನಸಾಗಿತ್ತು ಅಂದಿದ್ದಾರೆ. ಕಾಶ್ಮೀರದಿಂದ ನೇರವಾಗಿ ಹುಟ್ಟೂರಿಗೆ ಬಂದ ದೇವೇಗೌಡರು, ಶ್ರಾವಣಮಾಸದ ಕಡೇ ಶನಿವಾರ ರಂಗನಾಥ ಸ್ವಾಮಿ ದರ್ಶನ ಪಡೆದಿದ್ದಾರೆ. ಈ ವೇಳೆ ತಮ್ಮ ಕಾಶ್ಮೀರ ಭೇಟಿಯ ಬಗ್ಗೆ ದೇವೇಗೌಡರು ಮಾತಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ 27 ವರ್ಷಗಳ ಹಿಂದೆ ದೊಡ್ಡ ಕ್ರಾಂತಿಯನ್ನು ಮಾಡಿದ್ದರು.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more