ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!

ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!

Published : Dec 25, 2024, 01:14 PM ISTUpdated : Dec 25, 2024, 01:16 PM IST

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಕಮರಿಗೆ ಉರುಳಿ ಐವರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಮೃತ ಯೋಧರಲ್ಲಿ ಮೂವರು ಕರ್ನಾಟಕ ಮೂಲದವರು.

ದೆಹಲಿ/ಬೆಂಗಳೂರು (ಡಿ.25): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧಾರ್‌ನ ಬಲ್ನೋಯಿ ಪ್ರದೇಶದಲ್ಲಿ ಮಂಗಳವಾರ ಸೇನಾ ವಾಹನವೊಂದು ಕಮರಿಗೆ ಉರುಳಿದ ಪರಿಣಾಮ ಐವರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಆದರೆ, ಈ ಮೃತ ಯೋಧರ ಪೈಕಿ ಬೆಳಗಾವಿ, ಬಾಗಲಕೋಟೆ ಹಾಗೂ ಉಡುಪಿ ಮೂಲದ ಮೂವರು ಯೋಧರು ಕರ್ನಾಕದವರೇ ಸಾವಿಗೀಡಾಗಿರುದು ರಾಜ್ಯದ ಜನತೆ ಮಮ್ಮಲ ಮರುವಂತೆ ಮಾಡಿದೆ.

ಬೆಳಗಾವಿ ತಾಲೂಕಿನ ಸಾಂಬ್ರಾ‌ ಗ್ರಾಮದ ಯೋಧ ದಯಾನಂದ ತಿರಕಣ್ಣವರ (45), ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ನಾಗಪ್ಪ ಮಾರಿಗೊಂಡ (25) ಹಾಗೂ ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು ಬಿಜಾಡಿ ಗ್ರಾಮದ ಯೋಧ ಅನೂಪ್ (33) ಹುತಾತ್ಮಗೊಂಡ ಯೋಧರಾಗಿದ್ದಾರೆ. ಭಾರತೀಯ ಸೇನೆಯ 11 ಮದ್ರಾಸ್ ಲೈಟ್ ಇನ್‌ಫೆಂಟ್ರಿ (11 ಎಂಎಲ್‌ಐ) ಗೆ ಸೇರಿದ ವಾಹನವು ನಿಲಂ ಪ್ರಧಾನ ಕಛೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್‌ಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇನ್ನು ಈ ಸೇನಾವಾಹನದಲ್ಲಿ ಮೃತರ ಪೈಕಿ 5 ಜನರಲ್ಲಿ ಬಹುಪಾಲು ನಮ್ಮ ಕನ್ನಡ ನಾಡಿನವರೇ ಎನ್ನುವುದು ಕನ್ನಡಿಗರಿಗೆ ಅತೀವ ನೋವು ತರಿಸುವ ಘಟನೆಯಾಗಿದೆ.

ಹುತಾತ್ಮ ಯೋಧರ ಕುಟುಂಬ ಸದಸ್ಯರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಯೋಧರ ಕಳೇಬರಹಗಳನ್ನು ಸ್ವಗ್ರಾಮಕ್ಕೆ ತರಲಾಗುತ್ತಿದೆ. ಇಲ್ಲಿ ಯೋಧರ ಗ್ರಾಮದಲ್ಲಿ ಅಂತಿಮ ವಿಧಿ-ವಿಧಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more