ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!

ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!

Published : Dec 25, 2024, 01:14 PM ISTUpdated : Dec 25, 2024, 01:16 PM IST

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಕಮರಿಗೆ ಉರುಳಿ ಐವರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಮೃತ ಯೋಧರಲ್ಲಿ ಮೂವರು ಕರ್ನಾಟಕ ಮೂಲದವರು.

ದೆಹಲಿ/ಬೆಂಗಳೂರು (ಡಿ.25): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧಾರ್‌ನ ಬಲ್ನೋಯಿ ಪ್ರದೇಶದಲ್ಲಿ ಮಂಗಳವಾರ ಸೇನಾ ವಾಹನವೊಂದು ಕಮರಿಗೆ ಉರುಳಿದ ಪರಿಣಾಮ ಐವರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಆದರೆ, ಈ ಮೃತ ಯೋಧರ ಪೈಕಿ ಬೆಳಗಾವಿ, ಬಾಗಲಕೋಟೆ ಹಾಗೂ ಉಡುಪಿ ಮೂಲದ ಮೂವರು ಯೋಧರು ಕರ್ನಾಕದವರೇ ಸಾವಿಗೀಡಾಗಿರುದು ರಾಜ್ಯದ ಜನತೆ ಮಮ್ಮಲ ಮರುವಂತೆ ಮಾಡಿದೆ.

ಬೆಳಗಾವಿ ತಾಲೂಕಿನ ಸಾಂಬ್ರಾ‌ ಗ್ರಾಮದ ಯೋಧ ದಯಾನಂದ ತಿರಕಣ್ಣವರ (45), ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ನಾಗಪ್ಪ ಮಾರಿಗೊಂಡ (25) ಹಾಗೂ ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು ಬಿಜಾಡಿ ಗ್ರಾಮದ ಯೋಧ ಅನೂಪ್ (33) ಹುತಾತ್ಮಗೊಂಡ ಯೋಧರಾಗಿದ್ದಾರೆ. ಭಾರತೀಯ ಸೇನೆಯ 11 ಮದ್ರಾಸ್ ಲೈಟ್ ಇನ್‌ಫೆಂಟ್ರಿ (11 ಎಂಎಲ್‌ಐ) ಗೆ ಸೇರಿದ ವಾಹನವು ನಿಲಂ ಪ್ರಧಾನ ಕಛೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್‌ಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇನ್ನು ಈ ಸೇನಾವಾಹನದಲ್ಲಿ ಮೃತರ ಪೈಕಿ 5 ಜನರಲ್ಲಿ ಬಹುಪಾಲು ನಮ್ಮ ಕನ್ನಡ ನಾಡಿನವರೇ ಎನ್ನುವುದು ಕನ್ನಡಿಗರಿಗೆ ಅತೀವ ನೋವು ತರಿಸುವ ಘಟನೆಯಾಗಿದೆ.

ಹುತಾತ್ಮ ಯೋಧರ ಕುಟುಂಬ ಸದಸ್ಯರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಯೋಧರ ಕಳೇಬರಹಗಳನ್ನು ಸ್ವಗ್ರಾಮಕ್ಕೆ ತರಲಾಗುತ್ತಿದೆ. ಇಲ್ಲಿ ಯೋಧರ ಗ್ರಾಮದಲ್ಲಿ ಅಂತಿಮ ವಿಧಿ-ವಿಧಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more