ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!

ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!

Published : Dec 25, 2024, 01:14 PM ISTUpdated : Dec 25, 2024, 01:16 PM IST

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಕಮರಿಗೆ ಉರುಳಿ ಐವರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಮೃತ ಯೋಧರಲ್ಲಿ ಮೂವರು ಕರ್ನಾಟಕ ಮೂಲದವರು.

ದೆಹಲಿ/ಬೆಂಗಳೂರು (ಡಿ.25): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧಾರ್‌ನ ಬಲ್ನೋಯಿ ಪ್ರದೇಶದಲ್ಲಿ ಮಂಗಳವಾರ ಸೇನಾ ವಾಹನವೊಂದು ಕಮರಿಗೆ ಉರುಳಿದ ಪರಿಣಾಮ ಐವರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಆದರೆ, ಈ ಮೃತ ಯೋಧರ ಪೈಕಿ ಬೆಳಗಾವಿ, ಬಾಗಲಕೋಟೆ ಹಾಗೂ ಉಡುಪಿ ಮೂಲದ ಮೂವರು ಯೋಧರು ಕರ್ನಾಕದವರೇ ಸಾವಿಗೀಡಾಗಿರುದು ರಾಜ್ಯದ ಜನತೆ ಮಮ್ಮಲ ಮರುವಂತೆ ಮಾಡಿದೆ.

ಬೆಳಗಾವಿ ತಾಲೂಕಿನ ಸಾಂಬ್ರಾ‌ ಗ್ರಾಮದ ಯೋಧ ದಯಾನಂದ ತಿರಕಣ್ಣವರ (45), ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ನಾಗಪ್ಪ ಮಾರಿಗೊಂಡ (25) ಹಾಗೂ ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು ಬಿಜಾಡಿ ಗ್ರಾಮದ ಯೋಧ ಅನೂಪ್ (33) ಹುತಾತ್ಮಗೊಂಡ ಯೋಧರಾಗಿದ್ದಾರೆ. ಭಾರತೀಯ ಸೇನೆಯ 11 ಮದ್ರಾಸ್ ಲೈಟ್ ಇನ್‌ಫೆಂಟ್ರಿ (11 ಎಂಎಲ್‌ಐ) ಗೆ ಸೇರಿದ ವಾಹನವು ನಿಲಂ ಪ್ರಧಾನ ಕಛೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್‌ಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇನ್ನು ಈ ಸೇನಾವಾಹನದಲ್ಲಿ ಮೃತರ ಪೈಕಿ 5 ಜನರಲ್ಲಿ ಬಹುಪಾಲು ನಮ್ಮ ಕನ್ನಡ ನಾಡಿನವರೇ ಎನ್ನುವುದು ಕನ್ನಡಿಗರಿಗೆ ಅತೀವ ನೋವು ತರಿಸುವ ಘಟನೆಯಾಗಿದೆ.

ಹುತಾತ್ಮ ಯೋಧರ ಕುಟುಂಬ ಸದಸ್ಯರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಯೋಧರ ಕಳೇಬರಹಗಳನ್ನು ಸ್ವಗ್ರಾಮಕ್ಕೆ ತರಲಾಗುತ್ತಿದೆ. ಇಲ್ಲಿ ಯೋಧರ ಗ್ರಾಮದಲ್ಲಿ ಅಂತಿಮ ವಿಧಿ-ವಿಧಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more