ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ, ಸಮಾರಂಭಕ್ಕೆ ರಜನಿಕಾಂತ್ ಸೇರಿ ಹಲವು ಗಣ್ಯರು!

Oct 31, 2022, 10:56 PM IST

ಮರೆಯಾದ ಮಾಣಿಕ್ಯ ಪುನೀತ್ ರಾಜ್‌ಕುಮಾರ್‌ಗೆ ನಾಳೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಿದೆ. ಪುನೀತ್ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ಗೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಧಾನಸೌಧದ ಮೆಟ್ಟಿಲುಗಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂನಿಯರ್ ಎನ್‌ಟಿಆರ್ ಸೇರಿದಂತೆ ಹಲವು ಸಿನಿ ದಿಗ್ಗಜರು ಆಗಮಿಸುತ್ತಿದ್ದಾರೆ. ಕನ್ನಡ ರಾಜ್ಯೋತ್ಸವ ಸಂಭ್ರಮದ ದಿನ ಪುನೀತ್‌ಗೆ ವಿಶೇಷವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.