ಕಾಶಿ, ಮಥುರಾ ವಿವಾದ ಬಗೆಹರಿಸಲು ಆರೆಸ್ಸೆಸ್‌ ಪ್ಲ್ಯಾನ್‌, ಮುಗಿಯುತ್ತಾ ದಶಕಗಳ ವಿವಾದ?

ಕಾಶಿ, ಮಥುರಾ ವಿವಾದ ಬಗೆಹರಿಸಲು ಆರೆಸ್ಸೆಸ್‌ ಪ್ಲ್ಯಾನ್‌, ಮುಗಿಯುತ್ತಾ ದಶಕಗಳ ವಿವಾದ?

Published : Jan 30, 2023, 11:18 PM IST

ದಶಕಗಳ ಕಾಲ ವಿವಾದದ ರೂಪದಲ್ಲಿಯೇ ಇರುವ ಕಾಶಿ ಹಾಗೂ ಮಥುರಾ ವಿವಾದ ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಆರಂಭವಾಗಿದೆ. ಆರೆಸ್ಸೆಸ್‌ ಸರಸಂಘಚಾಲಕರ ಬಳಿಕ ಮುಸ್ಲಿಂ ಚಿಂತಕರೊಂದಿಗೆ ಆರೆಸ್ಸೆಸ್‌ ಉಳಿದ ನಾಯಕರು 2ನೇ ಸಭೆ ನಡೆಸಿದ್ದಾರೆ.
 

ನವದೆಹಲಿ (ಜ.30): ಅಯೋಧ್ಯೆ ಬಳಿಕ ಕಾಶಿ ವಿಶ್ವನಾಥ ಹಾಗೂ ಮಥುರಾದ ಶ್ರೀಕೃಷ್ಣ ಜನ್ಮಭೂಮಿಯನ್ನು ಮತ್ತೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಹಿಂದುಗಳ ಹೋರಾಟ ಆರಂಭವಾಗಿದೆ. ಈಗಾಗಲೇ ಈ ಎರಡೂ ಕೇಸ್‌ಗಳ ವಿಚಾರಣೆ ಕೋರ್ಟ್‌ನಲ್ಲಿದೆ. ಇದರ ನಡುವೆ ವಿವಾದವನ್ನು ಸೌಹಾರ್ದವಾಗಿ ಬಗೆಹರಿಸುವ ನಿಟ್ಟಿನಲ್ಲಿ ಆರೆಸ್ಸೆಸ್‌ನ ಪ್ರಯತ್ನ ಆರಂಭವಾಗಿದೆ.

ವಿವಾದದಿಂದ ವಿಶ್ವಾಸದೆಡೆಗೆ ಆರೆಸ್ಸೆಸ್‌ ಮಹಾ ಹೆಜ್ಜೆ ಇಡುತ್ತಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ದೆಹಲಿಯಲ್ಲಿ ಇಮಾಮ್‌ ಅಸೋಸಿಯೇಷನ್‌ ಮುಖ್ಯಸ್ಥ ಉಮರ್‌ ಅಹ್ಮದ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆ ಬಳಿಕ ಜನವರಿ 14 ರಂದು ಮಾಜಿ ಗವರ್ನರ್‌ ನಜೀಬ್‌ ಜಂಗ್‌ ಮನೆಯಲ್ಲಿ ಆರೆಸ್ಸೆಸ್‌ ನಾಯಕರಾದ ಇಂದ್ರೇಶ್‌ ಕುಮಾರ್‌, ಕೃಷ್ಣಗೋಪಾಲ್‌, ರಾಮ್‌ಲಾಲ್‌ ಹಾಗೂ ಮುಸ್ಲಿಂ ಚಿಂತಕರಾದ ಮಾಜಿ ಚುನಾವಣಾ ಆಯುಕ್ತ ಸಯ್ಯದ್‌ ಖುರೇಷಿ, ಪತ್ರಕರ್ತ ಶಾಹಿದ್‌ ಸಿದ್ದಿಕಿ, ದಾರೂಲ್ - ಇ- ಇಸ್ಲಾಂ ಹಿಂದ್, ಜಾಮತ್ ಉಲಾಮಾ ಇ ಹಿಂದ್, ದಾರೂಲ್ ಉಲಾಮ್ ದಿಯೋಬಂದ್ ನಾಯಕರು ಭಾಗವಹಿಸಿದ್ದರು.

60 ಕೆಜಿ ಚಿನ್ನ, 10 ಕೆಜಿ ಬೆಳ್ಳಿ, 50 ಕೋಟಿ ನಗದು, ಕಾಶಿ ವಿಶ್ವನಾಥ ಕೂಡ ಈಗ ಶ್ರೀಮಂತ!

ಇದರ ನಡುವೆ ಸೌಹಾರ್ದತೆಗೆ ಎಐಎಂಐಎಂ ಮುಖಂಡ ಆಸಿಮ್‌ ವಖಾರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಆರೆಸ್ಸೆಸ್‌ನವರಿಗೆ ಯಾವ ಅಧಿಕಾರ ಇದೆ ಎಂದು ಮಾತುಕತೆ ಮಾಡುತ್ತಿದ್ದಾರೆ. ಮಾತುಕತೆಗೆ ಹೋದವರು ಮುಸ್ಲಿಂ ಸಮಾಜವನ್ನು ಪ್ರತಿನಿಧಿಸುತ್ತಾರಾ? ಎಂದು ಪ್ರಶ್ನೆ ಮಾಡಿದ್ದಾರೆ. ಸರ್ಕಾರದಿಂದ ಲಾಭ ಪಡೆದ ಕೆಲ ಮುಸ್ಲಿಮರು ಮಾತುಕತೆಗೆ ಹೋಗಿದ್ದಾರೆ. ಆರೆಸ್ಸೆಸ್ ದೇಶದ ಎಲ್ಲ ಹಿಂದೂಗಳನ್ನು ಪ್ರತಿನಿಧಿಸುವುದಿಲ್ಲ. ಆರೆಸ್ಸೆಸ್ ನವರಿಗೆ ಬೇಕಾದಂತೆ ಮಾತುಕತೆ ನಡೆಸಬಾರದು ಎಂದು ಸಿಪಿಐ ಮುಖಂಡ ಅತುಲ್‌ ಅಂಜಾನ್‌ ಹೇಳಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more