ಕಾಶಿ, ಮಥುರಾ ವಿವಾದ ಬಗೆಹರಿಸಲು ಆರೆಸ್ಸೆಸ್‌ ಪ್ಲ್ಯಾನ್‌, ಮುಗಿಯುತ್ತಾ ದಶಕಗಳ ವಿವಾದ?

ಕಾಶಿ, ಮಥುರಾ ವಿವಾದ ಬಗೆಹರಿಸಲು ಆರೆಸ್ಸೆಸ್‌ ಪ್ಲ್ಯಾನ್‌, ಮುಗಿಯುತ್ತಾ ದಶಕಗಳ ವಿವಾದ?

Published : Jan 30, 2023, 11:18 PM IST

ದಶಕಗಳ ಕಾಲ ವಿವಾದದ ರೂಪದಲ್ಲಿಯೇ ಇರುವ ಕಾಶಿ ಹಾಗೂ ಮಥುರಾ ವಿವಾದ ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಆರಂಭವಾಗಿದೆ. ಆರೆಸ್ಸೆಸ್‌ ಸರಸಂಘಚಾಲಕರ ಬಳಿಕ ಮುಸ್ಲಿಂ ಚಿಂತಕರೊಂದಿಗೆ ಆರೆಸ್ಸೆಸ್‌ ಉಳಿದ ನಾಯಕರು 2ನೇ ಸಭೆ ನಡೆಸಿದ್ದಾರೆ.
 

ನವದೆಹಲಿ (ಜ.30): ಅಯೋಧ್ಯೆ ಬಳಿಕ ಕಾಶಿ ವಿಶ್ವನಾಥ ಹಾಗೂ ಮಥುರಾದ ಶ್ರೀಕೃಷ್ಣ ಜನ್ಮಭೂಮಿಯನ್ನು ಮತ್ತೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಹಿಂದುಗಳ ಹೋರಾಟ ಆರಂಭವಾಗಿದೆ. ಈಗಾಗಲೇ ಈ ಎರಡೂ ಕೇಸ್‌ಗಳ ವಿಚಾರಣೆ ಕೋರ್ಟ್‌ನಲ್ಲಿದೆ. ಇದರ ನಡುವೆ ವಿವಾದವನ್ನು ಸೌಹಾರ್ದವಾಗಿ ಬಗೆಹರಿಸುವ ನಿಟ್ಟಿನಲ್ಲಿ ಆರೆಸ್ಸೆಸ್‌ನ ಪ್ರಯತ್ನ ಆರಂಭವಾಗಿದೆ.

ವಿವಾದದಿಂದ ವಿಶ್ವಾಸದೆಡೆಗೆ ಆರೆಸ್ಸೆಸ್‌ ಮಹಾ ಹೆಜ್ಜೆ ಇಡುತ್ತಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ದೆಹಲಿಯಲ್ಲಿ ಇಮಾಮ್‌ ಅಸೋಸಿಯೇಷನ್‌ ಮುಖ್ಯಸ್ಥ ಉಮರ್‌ ಅಹ್ಮದ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆ ಬಳಿಕ ಜನವರಿ 14 ರಂದು ಮಾಜಿ ಗವರ್ನರ್‌ ನಜೀಬ್‌ ಜಂಗ್‌ ಮನೆಯಲ್ಲಿ ಆರೆಸ್ಸೆಸ್‌ ನಾಯಕರಾದ ಇಂದ್ರೇಶ್‌ ಕುಮಾರ್‌, ಕೃಷ್ಣಗೋಪಾಲ್‌, ರಾಮ್‌ಲಾಲ್‌ ಹಾಗೂ ಮುಸ್ಲಿಂ ಚಿಂತಕರಾದ ಮಾಜಿ ಚುನಾವಣಾ ಆಯುಕ್ತ ಸಯ್ಯದ್‌ ಖುರೇಷಿ, ಪತ್ರಕರ್ತ ಶಾಹಿದ್‌ ಸಿದ್ದಿಕಿ, ದಾರೂಲ್ - ಇ- ಇಸ್ಲಾಂ ಹಿಂದ್, ಜಾಮತ್ ಉಲಾಮಾ ಇ ಹಿಂದ್, ದಾರೂಲ್ ಉಲಾಮ್ ದಿಯೋಬಂದ್ ನಾಯಕರು ಭಾಗವಹಿಸಿದ್ದರು.

60 ಕೆಜಿ ಚಿನ್ನ, 10 ಕೆಜಿ ಬೆಳ್ಳಿ, 50 ಕೋಟಿ ನಗದು, ಕಾಶಿ ವಿಶ್ವನಾಥ ಕೂಡ ಈಗ ಶ್ರೀಮಂತ!

ಇದರ ನಡುವೆ ಸೌಹಾರ್ದತೆಗೆ ಎಐಎಂಐಎಂ ಮುಖಂಡ ಆಸಿಮ್‌ ವಖಾರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಆರೆಸ್ಸೆಸ್‌ನವರಿಗೆ ಯಾವ ಅಧಿಕಾರ ಇದೆ ಎಂದು ಮಾತುಕತೆ ಮಾಡುತ್ತಿದ್ದಾರೆ. ಮಾತುಕತೆಗೆ ಹೋದವರು ಮುಸ್ಲಿಂ ಸಮಾಜವನ್ನು ಪ್ರತಿನಿಧಿಸುತ್ತಾರಾ? ಎಂದು ಪ್ರಶ್ನೆ ಮಾಡಿದ್ದಾರೆ. ಸರ್ಕಾರದಿಂದ ಲಾಭ ಪಡೆದ ಕೆಲ ಮುಸ್ಲಿಮರು ಮಾತುಕತೆಗೆ ಹೋಗಿದ್ದಾರೆ. ಆರೆಸ್ಸೆಸ್ ದೇಶದ ಎಲ್ಲ ಹಿಂದೂಗಳನ್ನು ಪ್ರತಿನಿಧಿಸುವುದಿಲ್ಲ. ಆರೆಸ್ಸೆಸ್ ನವರಿಗೆ ಬೇಕಾದಂತೆ ಮಾತುಕತೆ ನಡೆಸಬಾರದು ಎಂದು ಸಿಪಿಐ ಮುಖಂಡ ಅತುಲ್‌ ಅಂಜಾನ್‌ ಹೇಳಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more