Katchatheevu Controversy: ಲೋಕಸಭೆ ಹೊತ್ತಲ್ಲಿ ಭುಗಿಲೆದ್ದ ‘ಕಚ್ಚತೀವು’ ವಿವಾದ : ತಮಿಳುನಾಡಲ್ಲಿ ಬಿಜೆಪಿಗೆ ಹೊಸ ಅಸ್ತ್ರ!

Katchatheevu Controversy: ಲೋಕಸಭೆ ಹೊತ್ತಲ್ಲಿ ಭುಗಿಲೆದ್ದ ‘ಕಚ್ಚತೀವು’ ವಿವಾದ : ತಮಿಳುನಾಡಲ್ಲಿ ಬಿಜೆಪಿಗೆ ಹೊಸ ಅಸ್ತ್ರ!

Published : Apr 02, 2024, 12:03 PM IST

ಚುನಾವಣೆಯ ಹೊತ್ತಲ್ಲೇ ತಮಿಳುನಾಡಲ್ಲಿ ಬಿಜೆಪಿಗೆ ಭಾರೀ ಅಸ್ತ್ರ!
ಈ ಬಾರಿ ತಮಿಳುನಾಡಲ್ಲಿ ಖಾತೆ ತೆರೆಯಲು ಬಿಜೆಪಿಗೆ ಬ್ರಹ್ಮಾಸ್ತ್ರ!
ಕಚ್ಚತೀವು ದ್ವೀಪದ ಅಸ್ತ್ರ ಹಿಡಿದು ಅಖಾಡಕ್ಕಿಳಿದ ಪಿಎಂ ಮೋದಿ

ತಮಿಳುನಾಡಿನಲ್ಲಿ ಬಿಜೆಪಿ(BJP) ನಾಯಕರಿಗೆ ಮತ್ತೊಂದು ಬ್ರಹ್ಮಾಸ್ತ್ರ ಸಿಕ್ಕಿದೆ. 1974ರಲ್ಲಿ ಕಾಂಗ್ರೆಸ್(Congress) ಸರ್ಕಾರದ ಯಡವಟ್ಟನ್ನೇ ಚುನಾವಣಾ ಅಸ್ತ್ರವಾಗಿಸಿಕೊಂಡಿದೆ. ಮಾಲ್ಡೀವ್ಸ್‌ಗಿಂತಲೂ ಸುಂದರವಾಗಿರುವ ತಮಿಳುನಾಡಿನ ಕಚ್ಚತೀವು ದ್ವೀಪವನ್ನ(Katchatheevu Island) ಶ್ರೀಲಂಕಾಗೆ ಇಂದಿರಾ ಸರ್ಕಾರ ಬಿಟ್ಟು ಕೊಟ್ಟಿತು ಎಂಬುದು ಬಯಲಾಗಿದೆ. ತಮಿಳುನಾಡು(Tamilnadu) ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ(K. Annamalai) ಹಾಕಿದ ಆರ್‌ಟಿಐ ಅರ್ಜಿಯಲ್ಲಿ ಸತ್ಯ ಹೊರಬಂದಿದ್ದು ಆರೋಪ-ಪ್ರತ್ಯಾರೋಪ ಜೋರಾಗ್ತಿದೆ. ಕೆ. ಅಣ್ಣಾಮಲೈ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ಸರ್ಕಾರ ಮಾಹಿತಿ ನೀಡಿದ್ದು, ಆರ್‌ಟಿಐ ವರದಿ(RTI) ಬಹಿರಂಗವಾಗ್ತಿದ್ದಂತೆ ತಮಿಳುನಾಡಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈಗ ಕಾಂಗ್ರೆಸ್, ಡಿಎಂಕೆ(DMK) ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಾರೆ. ಟ್ವಿಟರ್‌ನಲ್ಲಿ ಕಾಂಗ್ರೆಸ್, ಡಿಎಂಕೆ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಎಡವಟ್ಟಿನಿಂದ ಕಚ್ಚತೀವು ದ್ವೀಪ ಕಳೆದುಕೊಂಡಿದ್ದೇವೆ. ತಮಿಳುನಾಡಿಗಾಗಿ ಡಿಎಂಕೆ ಏನು ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಂ ಮೋದಿ ಟ್ವೀಟ್‌ಗೆ ಕಿಡಿ ಕಾರಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ, 10 ವರ್ಷ ಆಡಳಿತದಲ್ಲಿ ಏನು ಮಾಡುತ್ತಿದ್ರಿ ಎಂದು ವಾಗ್ದಾಳಿ ನಡೆಸಿದ್ದಾರೆ. ಚುನಾವಣೆಯ ಹೊತ್ತಲ್ಲಿ ಕಚತೀವು ನೆನಪಾಯ್ತಾ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Jagadish Shettar: ಬೆಳಗಾವಿಯಲ್ಲಿ ಮೂಲ VS ವಲಸಿಗ ಸಮರ: ಕಾಂಗ್ರೆಸ್‌ಗೆ ಬಿಜೆಪಿ ನಾಯಕರಿಂದ ಕೌಂಟರ್ ಅಟ್ಯಾಕ್ !

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!