Katchatheevu Controversy: ಲೋಕಸಭೆ ಹೊತ್ತಲ್ಲಿ ಭುಗಿಲೆದ್ದ ‘ಕಚ್ಚತೀವು’ ವಿವಾದ : ತಮಿಳುನಾಡಲ್ಲಿ ಬಿಜೆಪಿಗೆ ಹೊಸ ಅಸ್ತ್ರ!

Katchatheevu Controversy: ಲೋಕಸಭೆ ಹೊತ್ತಲ್ಲಿ ಭುಗಿಲೆದ್ದ ‘ಕಚ್ಚತೀವು’ ವಿವಾದ : ತಮಿಳುನಾಡಲ್ಲಿ ಬಿಜೆಪಿಗೆ ಹೊಸ ಅಸ್ತ್ರ!

Published : Apr 02, 2024, 12:03 PM IST

ಚುನಾವಣೆಯ ಹೊತ್ತಲ್ಲೇ ತಮಿಳುನಾಡಲ್ಲಿ ಬಿಜೆಪಿಗೆ ಭಾರೀ ಅಸ್ತ್ರ!
ಈ ಬಾರಿ ತಮಿಳುನಾಡಲ್ಲಿ ಖಾತೆ ತೆರೆಯಲು ಬಿಜೆಪಿಗೆ ಬ್ರಹ್ಮಾಸ್ತ್ರ!
ಕಚ್ಚತೀವು ದ್ವೀಪದ ಅಸ್ತ್ರ ಹಿಡಿದು ಅಖಾಡಕ್ಕಿಳಿದ ಪಿಎಂ ಮೋದಿ

ತಮಿಳುನಾಡಿನಲ್ಲಿ ಬಿಜೆಪಿ(BJP) ನಾಯಕರಿಗೆ ಮತ್ತೊಂದು ಬ್ರಹ್ಮಾಸ್ತ್ರ ಸಿಕ್ಕಿದೆ. 1974ರಲ್ಲಿ ಕಾಂಗ್ರೆಸ್(Congress) ಸರ್ಕಾರದ ಯಡವಟ್ಟನ್ನೇ ಚುನಾವಣಾ ಅಸ್ತ್ರವಾಗಿಸಿಕೊಂಡಿದೆ. ಮಾಲ್ಡೀವ್ಸ್‌ಗಿಂತಲೂ ಸುಂದರವಾಗಿರುವ ತಮಿಳುನಾಡಿನ ಕಚ್ಚತೀವು ದ್ವೀಪವನ್ನ(Katchatheevu Island) ಶ್ರೀಲಂಕಾಗೆ ಇಂದಿರಾ ಸರ್ಕಾರ ಬಿಟ್ಟು ಕೊಟ್ಟಿತು ಎಂಬುದು ಬಯಲಾಗಿದೆ. ತಮಿಳುನಾಡು(Tamilnadu) ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ(K. Annamalai) ಹಾಕಿದ ಆರ್‌ಟಿಐ ಅರ್ಜಿಯಲ್ಲಿ ಸತ್ಯ ಹೊರಬಂದಿದ್ದು ಆರೋಪ-ಪ್ರತ್ಯಾರೋಪ ಜೋರಾಗ್ತಿದೆ. ಕೆ. ಅಣ್ಣಾಮಲೈ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ಸರ್ಕಾರ ಮಾಹಿತಿ ನೀಡಿದ್ದು, ಆರ್‌ಟಿಐ ವರದಿ(RTI) ಬಹಿರಂಗವಾಗ್ತಿದ್ದಂತೆ ತಮಿಳುನಾಡಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈಗ ಕಾಂಗ್ರೆಸ್, ಡಿಎಂಕೆ(DMK) ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಾರೆ. ಟ್ವಿಟರ್‌ನಲ್ಲಿ ಕಾಂಗ್ರೆಸ್, ಡಿಎಂಕೆ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಎಡವಟ್ಟಿನಿಂದ ಕಚ್ಚತೀವು ದ್ವೀಪ ಕಳೆದುಕೊಂಡಿದ್ದೇವೆ. ತಮಿಳುನಾಡಿಗಾಗಿ ಡಿಎಂಕೆ ಏನು ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಂ ಮೋದಿ ಟ್ವೀಟ್‌ಗೆ ಕಿಡಿ ಕಾರಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ, 10 ವರ್ಷ ಆಡಳಿತದಲ್ಲಿ ಏನು ಮಾಡುತ್ತಿದ್ರಿ ಎಂದು ವಾಗ್ದಾಳಿ ನಡೆಸಿದ್ದಾರೆ. ಚುನಾವಣೆಯ ಹೊತ್ತಲ್ಲಿ ಕಚತೀವು ನೆನಪಾಯ್ತಾ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Jagadish Shettar: ಬೆಳಗಾವಿಯಲ್ಲಿ ಮೂಲ VS ವಲಸಿಗ ಸಮರ: ಕಾಂಗ್ರೆಸ್‌ಗೆ ಬಿಜೆಪಿ ನಾಯಕರಿಂದ ಕೌಂಟರ್ ಅಟ್ಯಾಕ್ !

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?