Katchatheevu Controversy: ಲೋಕಸಭೆ ಹೊತ್ತಲ್ಲಿ ಭುಗಿಲೆದ್ದ ‘ಕಚ್ಚತೀವು’ ವಿವಾದ : ತಮಿಳುನಾಡಲ್ಲಿ ಬಿಜೆಪಿಗೆ ಹೊಸ ಅಸ್ತ್ರ!

Katchatheevu Controversy: ಲೋಕಸಭೆ ಹೊತ್ತಲ್ಲಿ ಭುಗಿಲೆದ್ದ ‘ಕಚ್ಚತೀವು’ ವಿವಾದ : ತಮಿಳುನಾಡಲ್ಲಿ ಬಿಜೆಪಿಗೆ ಹೊಸ ಅಸ್ತ್ರ!

Published : Apr 02, 2024, 12:03 PM IST

ಚುನಾವಣೆಯ ಹೊತ್ತಲ್ಲೇ ತಮಿಳುನಾಡಲ್ಲಿ ಬಿಜೆಪಿಗೆ ಭಾರೀ ಅಸ್ತ್ರ!
ಈ ಬಾರಿ ತಮಿಳುನಾಡಲ್ಲಿ ಖಾತೆ ತೆರೆಯಲು ಬಿಜೆಪಿಗೆ ಬ್ರಹ್ಮಾಸ್ತ್ರ!
ಕಚ್ಚತೀವು ದ್ವೀಪದ ಅಸ್ತ್ರ ಹಿಡಿದು ಅಖಾಡಕ್ಕಿಳಿದ ಪಿಎಂ ಮೋದಿ

ತಮಿಳುನಾಡಿನಲ್ಲಿ ಬಿಜೆಪಿ(BJP) ನಾಯಕರಿಗೆ ಮತ್ತೊಂದು ಬ್ರಹ್ಮಾಸ್ತ್ರ ಸಿಕ್ಕಿದೆ. 1974ರಲ್ಲಿ ಕಾಂಗ್ರೆಸ್(Congress) ಸರ್ಕಾರದ ಯಡವಟ್ಟನ್ನೇ ಚುನಾವಣಾ ಅಸ್ತ್ರವಾಗಿಸಿಕೊಂಡಿದೆ. ಮಾಲ್ಡೀವ್ಸ್‌ಗಿಂತಲೂ ಸುಂದರವಾಗಿರುವ ತಮಿಳುನಾಡಿನ ಕಚ್ಚತೀವು ದ್ವೀಪವನ್ನ(Katchatheevu Island) ಶ್ರೀಲಂಕಾಗೆ ಇಂದಿರಾ ಸರ್ಕಾರ ಬಿಟ್ಟು ಕೊಟ್ಟಿತು ಎಂಬುದು ಬಯಲಾಗಿದೆ. ತಮಿಳುನಾಡು(Tamilnadu) ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ(K. Annamalai) ಹಾಕಿದ ಆರ್‌ಟಿಐ ಅರ್ಜಿಯಲ್ಲಿ ಸತ್ಯ ಹೊರಬಂದಿದ್ದು ಆರೋಪ-ಪ್ರತ್ಯಾರೋಪ ಜೋರಾಗ್ತಿದೆ. ಕೆ. ಅಣ್ಣಾಮಲೈ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ಸರ್ಕಾರ ಮಾಹಿತಿ ನೀಡಿದ್ದು, ಆರ್‌ಟಿಐ ವರದಿ(RTI) ಬಹಿರಂಗವಾಗ್ತಿದ್ದಂತೆ ತಮಿಳುನಾಡಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈಗ ಕಾಂಗ್ರೆಸ್, ಡಿಎಂಕೆ(DMK) ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಾರೆ. ಟ್ವಿಟರ್‌ನಲ್ಲಿ ಕಾಂಗ್ರೆಸ್, ಡಿಎಂಕೆ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಎಡವಟ್ಟಿನಿಂದ ಕಚ್ಚತೀವು ದ್ವೀಪ ಕಳೆದುಕೊಂಡಿದ್ದೇವೆ. ತಮಿಳುನಾಡಿಗಾಗಿ ಡಿಎಂಕೆ ಏನು ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಂ ಮೋದಿ ಟ್ವೀಟ್‌ಗೆ ಕಿಡಿ ಕಾರಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ, 10 ವರ್ಷ ಆಡಳಿತದಲ್ಲಿ ಏನು ಮಾಡುತ್ತಿದ್ರಿ ಎಂದು ವಾಗ್ದಾಳಿ ನಡೆಸಿದ್ದಾರೆ. ಚುನಾವಣೆಯ ಹೊತ್ತಲ್ಲಿ ಕಚತೀವು ನೆನಪಾಯ್ತಾ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Jagadish Shettar: ಬೆಳಗಾವಿಯಲ್ಲಿ ಮೂಲ VS ವಲಸಿಗ ಸಮರ: ಕಾಂಗ್ರೆಸ್‌ಗೆ ಬಿಜೆಪಿ ನಾಯಕರಿಂದ ಕೌಂಟರ್ ಅಟ್ಯಾಕ್ !

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?