News Hour: ದುಡ್ಡಿಲ್ಲದೆ ದೇವರ ನಾಡು ಕೇರಳ ದಿವಾಳಿ, ಸುಪ್ರೀಂ ಕೋರ್ಟ್‌ ಛೀಮಾರಿ!

News Hour: ದುಡ್ಡಿಲ್ಲದೆ ದೇವರ ನಾಡು ಕೇರಳ ದಿವಾಳಿ, ಸುಪ್ರೀಂ ಕೋರ್ಟ್‌ ಛೀಮಾರಿ!

Published : Apr 03, 2024, 10:46 PM IST

ದೇವರ ಸ್ವಂತ ನಾಡು, ಬುದ್ದಿವಂಥರ ಬೀಡು ಎನ್ನಲಾಗುತ್ತಿದ್ದ ಕೇರಳ ತನ್ನ ಹಣಕಾಸು ನಿವರ್ಹಣೆಯಲ್ಲಿ ಮಾಡಿದ ಪ್ರಮಾದದಿಂದ ದಿವಾಳಿಯಾಗುವ ಸನಿಹ ಬಂದಿದೆ. ಇನ್ನೊಂದೆಡೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಕೇರಳ ರಾಜ್ಯಕ್ಕೆ ಛೀಮಾರಿ ಹಾಕಲಾಗಿದೆ.
 

ಬೆಂಗಳೂರು (ಏ.3): ನೆರೆಯ ಕೇರಳ ರಾಜ್ಯ ಸಾಲದ ಸುಳಿಗೆ ಸಿಲುಕಿ ಒದ್ದಾಡುತ್ತಿದೆ. ಇದರ ಬೆನ್ನಲ್ಲಿಯೇ ಕೇರಳ ಸರ್ಕಾರಕ್ಕೆ ಸಾಲ ಪಡೆಯಲು ಕೇಂದ್ರ ಮಿತಿ ಹೇರಿದೆ. ಕೇಂದ್ರ ಸರ್ಕಾರದ ಮಿತಿ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಕೇರಳ ಸರ್ಕಾರಕ್ಕೆ ಛೀಮಾರಿ ಹಾಕಲಾಗಿದೆ.

ಅಶಿಸ್ತೇ ಇಂದಿನ ಕೇರಳ ಆರ್ಥಿಕ ದುಸ್ಥಿತಿಗೇ ಕಾರಣ. ಸಾಲಕ್ಕೆ ಅನುಮತಿ ಕೊಟ್ಟರೆ ಮತ್ತಷ್ಟು ಸಾಲಕ್ಕೆ ಕಾರಣವಾಗಲಿದೆ  ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸಾಲದ ಮಿತಿ ನಿರ್ಬಂಧ ತೆರವಿಗೆ ಕೇರಳ ಅರ್ಜಿ ಸಲ್ಲಿಕೆ ಮಾಡಿತ್ತು. ಆರ್ಥಿಕ ಸಂಕಷ್ಟ ತಗ್ಗಿಸಲು ಕೇಂದ್ರದಿಂದ ಪರಿಹಾರ ಕೊಡಿಸಲು ಅರ್ಜಿ ಹಾಕಲಾಗಿತ್ತು. ಆದರೆ ಕೇರಳ ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಸಿಎಎ ಅನುಷ್ಠಾನಕ್ಕೆ ಪಾಕ್‌ ನಿರಾಶ್ರಿತ ಹಿಂದೂಗಳು ಹರ್ಷ: ಕೇರಳದಲ್ಲಿ ಜಾರಿ ಮಾಡಲ್ಲ ಎಂದ ಸಿಎಂ ಪಿಣರಾಯಿ

ಕೇಂದ್ರದಿಂದ ಮಧ್ಯಂತರ ಪರಿಹಾರ ಕೊಡಿಸಲು ಸುಪ್ರೀಂ ಸಾಧ್ಯವಿಲ್ಲ ಎಂದಿದೆ. ಅದಲ್ಲದೆ, ಕೇರಳ ಸರ್ಕಾರದ ಸಾಲ ಅರ್ಜಿ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿದೆ. ಸಂವಿಧಾನದ 293ನೇ ವಿಧಿ ಬಗ್ಗೆ ಪ್ರಸ್ತಾಪಿಸಿ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. 293ನೇ ವಿಧಿ - ರಾಜ್ಯಗಳು ಪಡೆಯುವ ಸಾಲ, ಕೇಂದ್ರದ ನಿರ್ಬಂಧದ ಬಗ್ಗೆ ಉಲ್ಲೇಖ ಮಾಡುತ್ತದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more