ಕೇರಳ ಪೊಲೀಸರಿಂದ ಕರ್ನಾಟಕ ಪೊಲೀಸರ ಬಂಧನ ಪ್ರಕರಣಕ್ಕೆ ಟ್ವಿಸ್ಟ್!

ಕೇರಳ ಪೊಲೀಸರಿಂದ ಕರ್ನಾಟಕ ಪೊಲೀಸರ ಬಂಧನ ಪ್ರಕರಣಕ್ಕೆ ಟ್ವಿಸ್ಟ್!

Published : Aug 05, 2023, 11:21 AM IST

ಕೇರಳದಲ್ಲಿ ಕರ್ನಾಟಕ ಪೊಲೀಸರು ಅರೆಸ್ಟ್ ಆದ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅತಿಯಾದ ಹಣದ ಆಸೆಗೆ ಬಿದ್ದು ರಾಜ್ಯದ ಮಾನ ಮರ್ಯಾದೆ ಹರಾಜಾಕಿರೋದು ಇದೀಗ ಬಟಾಬಯಲಾಗಿದೆ.

ಕೇರಳದಲ್ಲಿ ಕರ್ನಾಟಕ ಪೊಲೀಸರು ಅರೆಸ್ಟ್ ಆದ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅತಿಯಾದ ಹಣದ ಆಸೆಗೆ ಬಿದ್ದ ಪೊಲೀಸರು(police) ರಾಜ್ಯದ ಮಾನ ಮರ್ಯಾದೆ ಹರಾಜಾಕಿದ್ದಾರೆ. ಸೈಬರ್ ಕ್ರೈಮ್ (Cyber crime) ಪ್ರಕರಣದ ಆರೋಪಿ ಬಂಧನಕ್ಕೆ ಹೋಗಿದ್ದ, ವೈಟ್ ಫೀಲ್ಡ್ ಸೈಬರ್ ಕ್ರೈಂ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್ ಹಾಗೂ ತಂಡ ಕೇರಳ ಪೊಲೀಸರ(Kerala police)ಬಳಿ ಲಾಕ್ ಆಗಿದೆ. ಅಸಲಿಗೆ ಆಗಿದ್ದು ಇಷ್ಟೇ.. ಸೈಬರ್ ಕ್ರೈಂ ಪ್ರಕರಣದ ಆರೋಪಿಯಾಗಿದ್ದ ಅಖಿಲ್‌ನನ್ನು ಇನ್ಸ್ಪೆಕ್ಟರ್ ಶಿವಪ್ರಕಾಶ್ ಆಂಡ್ ಟೀಂ ಅರೆಸ್ಟ್ ಮಾಡಿ ಕರ್ನಾಟಕಕ್ಕೆ ಕರೆತರುತ್ತಿತ್ತು. ಮಾರ್ಗ ಮಧ್ಯೆ ಹಣದ ಆಸೆಗೆ ಬಿದ್ದ ಪೊಲೀಸರು ಆಲ್ ರೆಡಿ 3.95 ಲಕ್ಷ ಹಣ ನೀಡಿದ್ರೂ ಮತ್ತೆ 3 ಲಕ್ಷ ಹಣಕ್ಕೆ(money) ಆರೋಪಿಗಳ ಬಳಿ ಡಿಮ್ಯಾಂಡ್ ಮಾಡಿದ್ದಾರೆ. ಈ ವೇಳೆ ಹಣ ಕೊಡುವುದಾಗಿ ಕರೆದೊಯ್ದ ಆರೋಪಿ ಅಖಿಲ್, ಕೇರಳದ ಕಲ್ಲಂಚೇರಿ ಪೊಲೀಸರ ಬಳಿ ಕರ್ನಾಟಕದ ಪೊಲೀಸರನ್ನು ಲಾಕ್ ಮಾಡಿಸಿದ್ದಾನೆ. ಇನ್ಸ್ಪೆಕ್ಟರ್ ಶಿವಪ್ರಕಾಶ್ ಆಂಡ್ ಟೀಂ ಆರೋಪಿ ಅಖಿಲ್‌ಗೆ ಆತನ ಮೊಬೈಲ್‌ ಫೋನ್ ಕೂಡ ಕೊಟ್ಟಿದ್ರು. ಈ ವೇಳೆ ತನ್ನ ಗರ್ಲ್ ಫ್ರೆಂಡ್ ಜೊತೆ ಮಾತಾನಾಡ್ತಿದ್ದ ಅಖಿಲ್, ಆಕೆಯ ಮಾತನ್ನು ಚಾಚುತಪ್ಪದೇ ಫಾಲೋ ಮಾಡಿದ್ದಾನೆ. ಆಕೆಯ ಪ್ಲಾನ್ ನಂತೆ ಇನ್ನೂ 3 ಲಕ್ಷ ಹಣ ನೀಡುವುದಾಗಿ, ಇನ್ಸ್ಪೆಕ್ಟರ್ ಶಿವಪ್ರಕಾಶ್ ಟೀಂನನ್ನು ನಂಬಿಸಿದ ಅಖಿಲ್, ಬಳಿಕ ಅವರನ್ನು ಕೊಚ್ಚಿಯ ಕಲ್ಲಂಚೇರಿಗೆ ಕರೆತಂದು ಹಣ ನೀಡುವಾಗ ಕೇರಳ ಪೊಲೀಸರ ಬಲೆಗೆ ಬೀಳಿಸಿದ್ದಾನೆ. ಕಲ್ಲಂಚೇರಿ ಪೊಲೀಸರು ಹಣ ಪಡೆಯುವಾಗ ರೆಡ್ ಹ್ಯಾಂಡಾಗಿ ವೈಟ್ ಫೀಲ್ಡ್ ಪೊಲೀಸರನ್ನು ಲಾಕ್ ಮಾಡಿ ಪ್ರಕರಣ ದಾಖಲು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾವಾಡಿಗರಹಟ್ಟಿಗೆ ಕೇಂದ್ರ, ರಾಜ್ಯ ಸಚಿವರು ಭೇಟಿ: ಡಿಸಿಗೆ ತಿಮ್ಮಾಪುರ ತರಾಟೆ

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more