ಸ್ವಾಮೀಜಿ ಹೇಳಿಕೆ ವೈಯಕ್ತಿಕ, ಸಿಎಂ ಹುದ್ದೆ ಬಗ್ಗೆ ಚರ್ಚೆ ಈಗ ಅಪ್ರಸ್ತುತ: ಕೆ.ಎಚ್‌.ಮುನಿಯಪ್ಪ

Jun 28, 2024, 1:28 PM IST

ಕೆಂಪೇಗೌಡ ಜಯಂತಿ ವೇಳೆ ಚಂದ್ರಶೇಖರ್‌ ಸ್ವಾಮೀಜಿ (Chandrashekhar Swamiji) ಸಿಎಂ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯನ್ನು ಡಿಕೆ ಶಿವಕುಮಾರ್‌ ಅವರಿಗೆ ಬಿಟ್ಟು ಕೊಡಲಿ ಎಂದು ಹೇಳಿದ್ದರು. ಅವರ ಈ ಹೇಳಿಕೆಗೆ ಸಚಿವ ಕೆ.ಎಚ್‌.ಮುನಿಯಪ್ಪ(Minister KH Muniyappa) ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಸ್ವಾಮೀಜಿ ಹೇಳಿಕೆ ವೈಯಕ್ತಿಕ. ಶಾಸಕರು, ಹೈಕಮಾಂಡ್ ತೀರ್ಮಾನಿಸಿ ಸಿಎಂ ಮಾಡಿದ್ದಾರೆ. ಮುಖ್ಯಮಂತ್ರಿ ಹುದ್ದೆ(Chief Minister post ) ಬಗ್ಗೆ ಚರ್ಚೆ ಈಗ ಅಪ್ರಸ್ತುತ. ಸಿಎಂ, ಡಿಸಿಎಂ ಹುದ್ದೆಗೆ ಡಿಮ್ಯಾಂಡ್ ಇದೆ. ಹೈಕಮಾಂಡ್ ಮುಂದೆ ಅಭಿಪ್ರಾಯ ತಿಳಿಸಬೇಕು. ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ದೆಹಲಿಯಲ್ಲಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಟ್ ಕಾಯಿನ್ ಹಗರಣ: ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್‌