ಡಿ.13ರಂದು ಸಂಸತ್‌ ಮೇಲೆ ದಾಳಿ, ಖಲಿಸ್ತಾನಿ ಉಗ್ರ ಪನ್ನು ಎಚ್ಚರಿಕೆ!

ಡಿ.13ರಂದು ಸಂಸತ್‌ ಮೇಲೆ ದಾಳಿ, ಖಲಿಸ್ತಾನಿ ಉಗ್ರ ಪನ್ನು ಎಚ್ಚರಿಕೆ!

Published : Dec 06, 2023, 04:20 PM IST

ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನು, ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, ದೇಶದ ಹೊಸ ಸಂಸತ್‌ ಭವನದ ಮೇಲೆ ದಾಳಿ ಮಾಡುವ ಎಚ್ಚರಿಕೆ ನೀಡಿದ್ದಾನೆ.
 

ನವದೆಹಲಿ (ಡಿ.6):  ಅಮೆರಿಕದಲ್ಲಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನು, ವಿಡಿಯೋವೊಂದರಲ್ಲಿ, ತನ್ನನ್ನು ಕೊಲ್ಲಲು ಭಾರತೀಯ ಏಜೆನ್ಸಿಗಳ ಸಂಚು ವಿಫಲವಾಗಿದೆ ಎಂದು ಹೇಳಿರುವ ಆತ, ಡಿಸೆಂಬರ್ 13 ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. 

ವೀಡಿಯೋ ಬಹಿರಂಗವಾದ ನಂತರ ದೆಹಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. 2001 ರಲ್ಲಿ ಭಯೋತ್ಪಾದಕರು ಸಂಸತ್‌ ಮೇಲೆ ಇದೇ ದಿನ ದಾಳಿ ನಡೆಸಿದ್ದರು. ಈ ಬಾರಿ ಅದಕ್ಕೆ 22 ವರ್ಷ ವಾಗಲಿದೆ. 2001 ರ ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವೀಡಿಯೊದಲ್ಲಿ 'ದೆಹಲಿ ಬನೇಗಾ ಖಲಿಸ್ತಾನ್' (ದೆಹಲಿ ಖಲಿಸ್ತಾನ್ ಆಗಿ ಬದಲಾಗುತ್ತದೆ) ಎಂಬ ಶೀರ್ಷಿಕೆಯೊಂದಿಗೆ ಪನ್ನು ,  ಭಾರತೀಯ ಏಜೆನ್ಸಿಗಳು ತನ್ನನ್ನು ಕೊಲ್ಲುವ ಸಂಚು ವಿಫಲವಾಗಿದೆ ಎಂದು ಹೇಳಿದ್ದಾರೆ.

ಹಮಾಸ್‌ ರೀತಿಯಲ್ಲೇ ಭಾರತದ ಮೇಲೆ ದಾಳಿ ಮಾಡ್ತೇವೆ, ಖಲಿಸ್ತಾನಿ ನಾಯಕ ಗುರುಪತ್ವಂತ್‌ ಪನ್ನು ಎಚ್ಚರಿಕೆ!

ಡಿಸೆಂಬರ್ 13 ಅಥವಾ ಅದಕ್ಕೂ ಮೊದಲು ಸಂಸತ್ತಿನ ಮೇಲೆ ದಾಳಿ ಮಾಡುವ ಮೂಲಕ ಪ್ರತಿಕ್ರಿಯಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ. ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ ಪನ್ನು ಬೆದರಿಕೆ ಬಂದಿದೆ. ಡಿಸೆಂಬರ್ 22ರವರೆಗೆ ಅಧಿವೇಶನ ನಡೆಯಲಿದೆ.

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು