ಡಿ.13ರಂದು ಸಂಸತ್‌ ಮೇಲೆ ದಾಳಿ, ಖಲಿಸ್ತಾನಿ ಉಗ್ರ ಪನ್ನು ಎಚ್ಚರಿಕೆ!

ಡಿ.13ರಂದು ಸಂಸತ್‌ ಮೇಲೆ ದಾಳಿ, ಖಲಿಸ್ತಾನಿ ಉಗ್ರ ಪನ್ನು ಎಚ್ಚರಿಕೆ!

Published : Dec 06, 2023, 04:20 PM IST

ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನು, ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, ದೇಶದ ಹೊಸ ಸಂಸತ್‌ ಭವನದ ಮೇಲೆ ದಾಳಿ ಮಾಡುವ ಎಚ್ಚರಿಕೆ ನೀಡಿದ್ದಾನೆ.
 

ನವದೆಹಲಿ (ಡಿ.6):  ಅಮೆರಿಕದಲ್ಲಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನು, ವಿಡಿಯೋವೊಂದರಲ್ಲಿ, ತನ್ನನ್ನು ಕೊಲ್ಲಲು ಭಾರತೀಯ ಏಜೆನ್ಸಿಗಳ ಸಂಚು ವಿಫಲವಾಗಿದೆ ಎಂದು ಹೇಳಿರುವ ಆತ, ಡಿಸೆಂಬರ್ 13 ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. 

ವೀಡಿಯೋ ಬಹಿರಂಗವಾದ ನಂತರ ದೆಹಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. 2001 ರಲ್ಲಿ ಭಯೋತ್ಪಾದಕರು ಸಂಸತ್‌ ಮೇಲೆ ಇದೇ ದಿನ ದಾಳಿ ನಡೆಸಿದ್ದರು. ಈ ಬಾರಿ ಅದಕ್ಕೆ 22 ವರ್ಷ ವಾಗಲಿದೆ. 2001 ರ ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವೀಡಿಯೊದಲ್ಲಿ 'ದೆಹಲಿ ಬನೇಗಾ ಖಲಿಸ್ತಾನ್' (ದೆಹಲಿ ಖಲಿಸ್ತಾನ್ ಆಗಿ ಬದಲಾಗುತ್ತದೆ) ಎಂಬ ಶೀರ್ಷಿಕೆಯೊಂದಿಗೆ ಪನ್ನು ,  ಭಾರತೀಯ ಏಜೆನ್ಸಿಗಳು ತನ್ನನ್ನು ಕೊಲ್ಲುವ ಸಂಚು ವಿಫಲವಾಗಿದೆ ಎಂದು ಹೇಳಿದ್ದಾರೆ.

ಹಮಾಸ್‌ ರೀತಿಯಲ್ಲೇ ಭಾರತದ ಮೇಲೆ ದಾಳಿ ಮಾಡ್ತೇವೆ, ಖಲಿಸ್ತಾನಿ ನಾಯಕ ಗುರುಪತ್ವಂತ್‌ ಪನ್ನು ಎಚ್ಚರಿಕೆ!

ಡಿಸೆಂಬರ್ 13 ಅಥವಾ ಅದಕ್ಕೂ ಮೊದಲು ಸಂಸತ್ತಿನ ಮೇಲೆ ದಾಳಿ ಮಾಡುವ ಮೂಲಕ ಪ್ರತಿಕ್ರಿಯಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ. ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ ಪನ್ನು ಬೆದರಿಕೆ ಬಂದಿದೆ. ಡಿಸೆಂಬರ್ 22ರವರೆಗೆ ಅಧಿವೇಶನ ನಡೆಯಲಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?