ಅತಿ ಶೀಘ್ರದಲ್ಲೇ ಕೊರೋನಾಗೆ ಮೇಡ್‌ ಇನ್ ಇಂಡಿಯಾ ಲಸಿಕೆ..?

ಅತಿ ಶೀಘ್ರದಲ್ಲೇ ಕೊರೋನಾಗೆ ಮೇಡ್‌ ಇನ್ ಇಂಡಿಯಾ ಲಸಿಕೆ..?

Suvarna News   | Asianet News
Published : Apr 27, 2020, 01:22 PM ISTUpdated : Apr 27, 2020, 02:15 PM IST

ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ 'ಕೋವಿಡ್ 19 ಸೋಂಕಿಗೆ ಭಾರತದಲ್ಲಿ ಲಸಿಕೆ ತಯಾರಾಗುತ್ತಿದೆ. ಈ ವರ್ಷದಲ್ಲೇ ಔಷಧಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಕೆಲವು ಕಂಪನಿಗಳ ಸಹಾಯೋಗದಲ್ಲಿ ಮೇಡನ್ ಇಂಡಿಯಾ ಲಸಿಕೆ ರೆಡಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು(ಏ.27): ಇಡೀ ಜಗತ್ತನ್ನೇ ಹೈರಾಣಾಗಿಸಿರುವ ಕೊರೋನಾ ವೈರಸ್‌ಗೆ ಜಗತ್ತಿನ ನಾನಾ ರಾಷ್ಟ್ರಗಳು ಔಷಧಿ ಕಂಡುಹಿಡಿಯಲು ಹಗಲಿರುಳು ಶ್ರಮಿಸುತ್ತಿವೆ. ಹೀಗಿರುವಾಗಲೇ ಬೆಂಗಳೂರು ಮೂಲದ ಬಯೋಕಾನ್ ಸಂಸ್ಥೆಯಿಂದ ಆಶಾದಾಯಕ ಸುದ್ದಿಯೊಂದು ಹೊರಬಿದ್ದಿದೆ.

ಹೌದು, ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ 'ಕೋವಿಡ್ 19 ಸೋಂಕಿಗೆ ಭಾರತದಲ್ಲಿ ಲಸಿಕೆ ತಯಾರಾಗುತ್ತಿದೆ. ಈ ವರ್ಷದಲ್ಲೇ ಔಷಧಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಕೆಲವು ಕಂಪನಿಗಳ ಸಹಾಯೋಗದಲ್ಲಿ ಮೇಡನ್ ಇಂಡಿಯಾ ಲಸಿಕೆ ರೆಡಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನಾ ಸೋಂಕಿನ ಲಸಿಕೆ ರೆಡಿಯಾದರೆ ಜನರಲ್ಲಿ ಆತ್ಮವಿಶ್ವಾಸ ಮೂಡಲಿದೆ. ಕೊರೋನಾ ಸೋಂಕಿಗೆ ಚಿಕಿತ್ಸೆ ಲಭ್ಯವಿದೆ ಎಂದು ಜನ ಮಾನಸದಲ್ಲಿ ನಂಬಿಕೆ ಬೇರೂರಿದರೆ ಆ ಬಳಿಕ ಸೋಂಕಿತರನ್ನು ನೋಡುವ ದೃಷ್ಟಿಕೋನವೇ ಬದಲಾಗುತ್ತದೆ ಎಂದು ಕಿರಣ್ ಮಜುಂದಾರ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಜಗತ್ತಿನಾದ್ಯಂತ ಸುಮಾರು 29 ಲಕ್ಷಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇನ್ನು 2 ಲಕ್ಷ ಜನ ಕೊರೋನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಕೊರೋನಾ ಸೋಂಕು ಹರಡದಂತೆ ತಡೆಯಲು ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್‌ಡೌನ್ ಘೋಷಿಸಲಾಗಿದೆಯಾದರೂ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಲೇ ಇರುವುದು ಸಾಕಷ್ಟು ಆತಂಕಕ್ಕೆ ಈಡು ಮಾಡಿದೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!