ಅತಿ ಶೀಘ್ರದಲ್ಲೇ ಕೊರೋನಾಗೆ ಮೇಡ್‌ ಇನ್ ಇಂಡಿಯಾ ಲಸಿಕೆ..?

ಅತಿ ಶೀಘ್ರದಲ್ಲೇ ಕೊರೋನಾಗೆ ಮೇಡ್‌ ಇನ್ ಇಂಡಿಯಾ ಲಸಿಕೆ..?

Suvarna News   | Asianet News
Published : Apr 27, 2020, 01:22 PM ISTUpdated : Apr 27, 2020, 02:15 PM IST

ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ 'ಕೋವಿಡ್ 19 ಸೋಂಕಿಗೆ ಭಾರತದಲ್ಲಿ ಲಸಿಕೆ ತಯಾರಾಗುತ್ತಿದೆ. ಈ ವರ್ಷದಲ್ಲೇ ಔಷಧಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಕೆಲವು ಕಂಪನಿಗಳ ಸಹಾಯೋಗದಲ್ಲಿ ಮೇಡನ್ ಇಂಡಿಯಾ ಲಸಿಕೆ ರೆಡಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು(ಏ.27): ಇಡೀ ಜಗತ್ತನ್ನೇ ಹೈರಾಣಾಗಿಸಿರುವ ಕೊರೋನಾ ವೈರಸ್‌ಗೆ ಜಗತ್ತಿನ ನಾನಾ ರಾಷ್ಟ್ರಗಳು ಔಷಧಿ ಕಂಡುಹಿಡಿಯಲು ಹಗಲಿರುಳು ಶ್ರಮಿಸುತ್ತಿವೆ. ಹೀಗಿರುವಾಗಲೇ ಬೆಂಗಳೂರು ಮೂಲದ ಬಯೋಕಾನ್ ಸಂಸ್ಥೆಯಿಂದ ಆಶಾದಾಯಕ ಸುದ್ದಿಯೊಂದು ಹೊರಬಿದ್ದಿದೆ.

ಹೌದು, ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ 'ಕೋವಿಡ್ 19 ಸೋಂಕಿಗೆ ಭಾರತದಲ್ಲಿ ಲಸಿಕೆ ತಯಾರಾಗುತ್ತಿದೆ. ಈ ವರ್ಷದಲ್ಲೇ ಔಷಧಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಕೆಲವು ಕಂಪನಿಗಳ ಸಹಾಯೋಗದಲ್ಲಿ ಮೇಡನ್ ಇಂಡಿಯಾ ಲಸಿಕೆ ರೆಡಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನಾ ಸೋಂಕಿನ ಲಸಿಕೆ ರೆಡಿಯಾದರೆ ಜನರಲ್ಲಿ ಆತ್ಮವಿಶ್ವಾಸ ಮೂಡಲಿದೆ. ಕೊರೋನಾ ಸೋಂಕಿಗೆ ಚಿಕಿತ್ಸೆ ಲಭ್ಯವಿದೆ ಎಂದು ಜನ ಮಾನಸದಲ್ಲಿ ನಂಬಿಕೆ ಬೇರೂರಿದರೆ ಆ ಬಳಿಕ ಸೋಂಕಿತರನ್ನು ನೋಡುವ ದೃಷ್ಟಿಕೋನವೇ ಬದಲಾಗುತ್ತದೆ ಎಂದು ಕಿರಣ್ ಮಜುಂದಾರ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಜಗತ್ತಿನಾದ್ಯಂತ ಸುಮಾರು 29 ಲಕ್ಷಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇನ್ನು 2 ಲಕ್ಷ ಜನ ಕೊರೋನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಕೊರೋನಾ ಸೋಂಕು ಹರಡದಂತೆ ತಡೆಯಲು ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್‌ಡೌನ್ ಘೋಷಿಸಲಾಗಿದೆಯಾದರೂ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಲೇ ಇರುವುದು ಸಾಕಷ್ಟು ಆತಂಕಕ್ಕೆ ಈಡು ಮಾಡಿದೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!