ಅತಿ ಶೀಘ್ರದಲ್ಲೇ ಕೊರೋನಾಗೆ ಮೇಡ್‌ ಇನ್ ಇಂಡಿಯಾ ಲಸಿಕೆ..?

ಅತಿ ಶೀಘ್ರದಲ್ಲೇ ಕೊರೋನಾಗೆ ಮೇಡ್‌ ಇನ್ ಇಂಡಿಯಾ ಲಸಿಕೆ..?

Suvarna News   | Asianet News
Published : Apr 27, 2020, 01:22 PM ISTUpdated : Apr 27, 2020, 02:15 PM IST

ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ 'ಕೋವಿಡ್ 19 ಸೋಂಕಿಗೆ ಭಾರತದಲ್ಲಿ ಲಸಿಕೆ ತಯಾರಾಗುತ್ತಿದೆ. ಈ ವರ್ಷದಲ್ಲೇ ಔಷಧಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಕೆಲವು ಕಂಪನಿಗಳ ಸಹಾಯೋಗದಲ್ಲಿ ಮೇಡನ್ ಇಂಡಿಯಾ ಲಸಿಕೆ ರೆಡಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು(ಏ.27): ಇಡೀ ಜಗತ್ತನ್ನೇ ಹೈರಾಣಾಗಿಸಿರುವ ಕೊರೋನಾ ವೈರಸ್‌ಗೆ ಜಗತ್ತಿನ ನಾನಾ ರಾಷ್ಟ್ರಗಳು ಔಷಧಿ ಕಂಡುಹಿಡಿಯಲು ಹಗಲಿರುಳು ಶ್ರಮಿಸುತ್ತಿವೆ. ಹೀಗಿರುವಾಗಲೇ ಬೆಂಗಳೂರು ಮೂಲದ ಬಯೋಕಾನ್ ಸಂಸ್ಥೆಯಿಂದ ಆಶಾದಾಯಕ ಸುದ್ದಿಯೊಂದು ಹೊರಬಿದ್ದಿದೆ.

ಹೌದು, ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ 'ಕೋವಿಡ್ 19 ಸೋಂಕಿಗೆ ಭಾರತದಲ್ಲಿ ಲಸಿಕೆ ತಯಾರಾಗುತ್ತಿದೆ. ಈ ವರ್ಷದಲ್ಲೇ ಔಷಧಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಕೆಲವು ಕಂಪನಿಗಳ ಸಹಾಯೋಗದಲ್ಲಿ ಮೇಡನ್ ಇಂಡಿಯಾ ಲಸಿಕೆ ರೆಡಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನಾ ಸೋಂಕಿನ ಲಸಿಕೆ ರೆಡಿಯಾದರೆ ಜನರಲ್ಲಿ ಆತ್ಮವಿಶ್ವಾಸ ಮೂಡಲಿದೆ. ಕೊರೋನಾ ಸೋಂಕಿಗೆ ಚಿಕಿತ್ಸೆ ಲಭ್ಯವಿದೆ ಎಂದು ಜನ ಮಾನಸದಲ್ಲಿ ನಂಬಿಕೆ ಬೇರೂರಿದರೆ ಆ ಬಳಿಕ ಸೋಂಕಿತರನ್ನು ನೋಡುವ ದೃಷ್ಟಿಕೋನವೇ ಬದಲಾಗುತ್ತದೆ ಎಂದು ಕಿರಣ್ ಮಜುಂದಾರ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಜಗತ್ತಿನಾದ್ಯಂತ ಸುಮಾರು 29 ಲಕ್ಷಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇನ್ನು 2 ಲಕ್ಷ ಜನ ಕೊರೋನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಕೊರೋನಾ ಸೋಂಕು ಹರಡದಂತೆ ತಡೆಯಲು ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್‌ಡೌನ್ ಘೋಷಿಸಲಾಗಿದೆಯಾದರೂ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಲೇ ಇರುವುದು ಸಾಕಷ್ಟು ಆತಂಕಕ್ಕೆ ಈಡು ಮಾಡಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!