ಅತಿ ಶೀಘ್ರದಲ್ಲೇ ಕೊರೋನಾಗೆ ಮೇಡ್‌ ಇನ್ ಇಂಡಿಯಾ ಲಸಿಕೆ..?

ಅತಿ ಶೀಘ್ರದಲ್ಲೇ ಕೊರೋನಾಗೆ ಮೇಡ್‌ ಇನ್ ಇಂಡಿಯಾ ಲಸಿಕೆ..?

Published : Apr 27, 2020, 01:22 PM ISTUpdated : Apr 27, 2020, 02:15 PM IST

ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ 'ಕೋವಿಡ್ 19 ಸೋಂಕಿಗೆ ಭಾರತದಲ್ಲಿ ಲಸಿಕೆ ತಯಾರಾಗುತ್ತಿದೆ. ಈ ವರ್ಷದಲ್ಲೇ ಔಷಧಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಕೆಲವು ಕಂಪನಿಗಳ ಸಹಾಯೋಗದಲ್ಲಿ ಮೇಡನ್ ಇಂಡಿಯಾ ಲಸಿಕೆ ರೆಡಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು(ಏ.27): ಇಡೀ ಜಗತ್ತನ್ನೇ ಹೈರಾಣಾಗಿಸಿರುವ ಕೊರೋನಾ ವೈರಸ್‌ಗೆ ಜಗತ್ತಿನ ನಾನಾ ರಾಷ್ಟ್ರಗಳು ಔಷಧಿ ಕಂಡುಹಿಡಿಯಲು ಹಗಲಿರುಳು ಶ್ರಮಿಸುತ್ತಿವೆ. ಹೀಗಿರುವಾಗಲೇ ಬೆಂಗಳೂರು ಮೂಲದ ಬಯೋಕಾನ್ ಸಂಸ್ಥೆಯಿಂದ ಆಶಾದಾಯಕ ಸುದ್ದಿಯೊಂದು ಹೊರಬಿದ್ದಿದೆ.

ಹೌದು, ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ 'ಕೋವಿಡ್ 19 ಸೋಂಕಿಗೆ ಭಾರತದಲ್ಲಿ ಲಸಿಕೆ ತಯಾರಾಗುತ್ತಿದೆ. ಈ ವರ್ಷದಲ್ಲೇ ಔಷಧಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಕೆಲವು ಕಂಪನಿಗಳ ಸಹಾಯೋಗದಲ್ಲಿ ಮೇಡನ್ ಇಂಡಿಯಾ ಲಸಿಕೆ ರೆಡಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನಾ ಸೋಂಕಿನ ಲಸಿಕೆ ರೆಡಿಯಾದರೆ ಜನರಲ್ಲಿ ಆತ್ಮವಿಶ್ವಾಸ ಮೂಡಲಿದೆ. ಕೊರೋನಾ ಸೋಂಕಿಗೆ ಚಿಕಿತ್ಸೆ ಲಭ್ಯವಿದೆ ಎಂದು ಜನ ಮಾನಸದಲ್ಲಿ ನಂಬಿಕೆ ಬೇರೂರಿದರೆ ಆ ಬಳಿಕ ಸೋಂಕಿತರನ್ನು ನೋಡುವ ದೃಷ್ಟಿಕೋನವೇ ಬದಲಾಗುತ್ತದೆ ಎಂದು ಕಿರಣ್ ಮಜುಂದಾರ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಜಗತ್ತಿನಾದ್ಯಂತ ಸುಮಾರು 29 ಲಕ್ಷಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇನ್ನು 2 ಲಕ್ಷ ಜನ ಕೊರೋನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಕೊರೋನಾ ಸೋಂಕು ಹರಡದಂತೆ ತಡೆಯಲು ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್‌ಡೌನ್ ಘೋಷಿಸಲಾಗಿದೆಯಾದರೂ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಲೇ ಇರುವುದು ಸಾಕಷ್ಟು ಆತಂಕಕ್ಕೆ ಈಡು ಮಾಡಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?