Punjab: ಸಿಎಂನನ್ನೇ ಸೋಲಿಸಿದ ಮೊಬೈಲ್ ರಿಪೇರಿ ಮಾಡುವ ಕಾಮನ್ ಮ್ಯಾನ್

Mar 12, 2022, 5:24 PM IST

 ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. ಚುನಾವಣೆ ಎದುರಿಸಿದ 5 ರಾಜ್ಯಗಳ ಪೈಕಿ ಉತ್ತರಪ್ರದೇಶ, ಉತ್ತರಾಖಂಡ, ಮಣಿಪುರ ಹಾಗೂ ಗೋವಾದಲ್ಲಿ ಐದು ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿ, ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿನಿಂತು ಆ ನಾಲ್ಕೂ ರಾಜ್ಯಗಳಲ್ಲೂ ವಿಜಯ ಪತಾಕೆ ಹಾರಿಸಿದೆ. 

ಉತ್ತರ ಪ್ರದೇಶದಲ್ಲಿ ಕಳೆದ 35 ವರ್ಷಗಳಲ್ಲಿ ಮತ್ತೊಂದು ಅವಧಿಗೆ ಪುನರಾಯ್ಕೆಯಾದ ಮೊದಲ ಪಕ್ಷ ಎಂಬ ದಾಖಲೆ ಬರೆದಿದೆ. ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವರ್ಚಸ್ಸು ಭಾರೀ ಪ್ರಮಾಣದಲ್ಲಿ ಹೆಚ್ಚಿದೆ.

ಉತ್ತರಾಖಂಡದಲ್ಲಿ ಸ್ವತಃ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಸೋತರೂ 50ರ ಸನಿಹಕ್ಕೆ ಬಿಜೆಪಿ ಸೀಟು ಗಳಿಸಿದ್ದು, ಕಾಂಗ್ರೆಸ್ಸನ್ನು ಮಣ್ಣು ಮುಕ್ಕಿಸಿದೆ ಹಾಗೂ ಸತತ 2ನೇ ಬಾರಿ ಅಧಿಕಾರಕ್ಕೆ ಬಂದಿದೆ. ಉತ್ತರಾಖಂಡ ಇತಿಹಾಸದಲ್ಲೇ ಒಂದು ಪಕ್ಷ ಪುನರಾಯ್ಕೆಯಾಗಿದ್ದು ಇದೇ ಮೊದಲು. ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಗೆಲುವು ಕಾಣುವುದರೊಂದಿಗೆ ರಾಜ್ಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ.