ರಥಯಾತ್ರೆ ಸಾರಥಿಯ ಧರ್ಮಜಾಗೃತಿ ಹೋರಾಟ..! ರಾಮನಿಗಾಗಿ ಅಡ್ವಾಣಿ ಎದುರಿಸಿದ ವಿಚಾರಣೆಗಳೆಷ್ಟು..?

ರಥಯಾತ್ರೆ ಸಾರಥಿಯ ಧರ್ಮಜಾಗೃತಿ ಹೋರಾಟ..! ರಾಮನಿಗಾಗಿ ಅಡ್ವಾಣಿ ಎದುರಿಸಿದ ವಿಚಾರಣೆಗಳೆಷ್ಟು..?

Published : Feb 04, 2024, 10:07 AM ISTUpdated : Feb 04, 2024, 10:08 AM IST

ರಾಮ ಮಂದಿರ ಹೋರಾಟದ ರೂವಾರಿ ಎಲ್ ಕೆ ಅಡ್ವಾಣಿ..!
ಮಂದಿರ ಹೋರಾಟದಲ್ಲಿ ಅಡ್ವಾಣಿ ಹೆಸರು ಅಜರಾಮರ..!
‘ಮಂದಿರ್ ವಹೀ ಬನಾಯೆಂಗೇ..ಕೌನ್ ರೋಖೇಗಾ..? ’

ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾಗಿರುವ ಲಾಲ್ ಕೃಷ್ಣ ಅಡ್ವಾಣಿಯವರಿಗೆ(LK Advani) ಭಾರತ ರತ್ನ ಪ್ರಶಸ್ತಿ ಘೋಷಣೆಯಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ರಾಮ ಮಂದಿರ(Ram Mandir) ಉದ್ಘಾಟನೆ ಬೆನ್ನಲ್ಲೇ ಭಾರತದ ಅತ್ಯುನ್ನತ ನಾಗರಿಕ ಗೌರವ(Bharat Ratna) ಸಿಕ್ಕಿರೋದು ರಾಮಭಕ್ತ ಅಡ್ವಾಣಿಯವರ ಕೀರ್ತಿ ಹೆಚ್ಚಿಸಿದೆ. ಸ್ವತಂತ್ರ್ಯ ಪೂರ್ವ ಭಾರತದ ಸಿಂಧ್ ಪ್ರಾಂತ್ಯದ ಗೊರೆಗಾಂವ್‌ನಲ್ಲಿ ಅಂದರೆ ಈಗಿನ ಪಾಕಿಸ್ತಾನದ ಕರಾಚಿಯಲ್ಲಿ ನವೆಂಬರ್ 8, 1927ರಲ್ಲಿ ಜನಿಸಿದ ಅಡ್ವಾಣಿ, ಬಳಿಕ 1941 ತನ್ನ 14ನೇ ವಯಸ್ಸಿನಲ್ಲಿ ಆರ್‌ಎಸ್‌ಎಸ್‌ಗೆ(RSS) ಸೇರ್ಪಡೆಗೊಂಡರು. 1947ರಲ್ಲಿ ಕರಾಚಿ ಯುನಿಟ್‌ಗೆ ಕಾರ್ಯದರ್ಶಿಯಾದರು. ಜನಸಂಘದ ಮೂಲಕ ರಾಜಕೀಯ ಜೀವನವನ್ನು ಆರಂಭಿಸಿದ ಲಾಲ್ ಕೃಷ್ಣ ಅಡ್ವಾಣಿ. ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜತೆಗೂಡಿ ಬಿಜೆಪಿಯನ್ನು(BJP) ಕಟ್ಟಲು ದಶಕಗಳ ಕಾಲ ಹಗಲಿರುಳು ದೇಶಾದ್ಯಂತ ಸುತ್ತಾಡಿದ್ದಾರೆ. ಬಿಜೆಪಿಯಲ್ಲಿ ಏನೂ ಇಲ್ಲದಿದ್ದಾಗ ಪಕ್ಷವನ್ನು ಕಟ್ಟುವುದರ ಜತೆಗೆ ಪ್ರತಿ ರಾಜ್ಯಗಳಲ್ಲೂ ಬಿಜೆಪಿ ಸರ್ಕಾರಗಳು ಬರುವ ನಿಟ್ಟಿನಲ್ಲಿ ಕೆಲಸವನ್ನು ಆರಂಭಿಸಿದ್ದು  ಇದೇ ಅಡ್ವಾಣಿ. ರಾಮಮಂದಿರ ನಿರ್ಮಾಣಕ್ಕೆ ರಥಯಾತ್ರೆ, ರಾಮಮಂದಿರ ನಿರ್ಮಾಣ ಹೋರಾಟ ಸೇರಿದಂತೆ ಇನ್ನಿತರೆ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು.

ಇದನ್ನೂ ವೀಕ್ಷಿಸಿ:  LK Advani: ಬಿಜೆಪಿ ಭೀಷ್ಮ..ಅಡ್ವಾಣಿಗೆ ಭಾರತ ರತ್ನ: ರಾಜಕೀಯ ಗುರುವಿಗೆ ಶಿಷ್ಯ ಕೊಟ್ಟ ಅದ್ಭುತ ಕಾಣಿಕೆ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more