ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸರ್ಕಾರ ಇನ್ನೂ ದಾಖಲೆ ಕೊಟ್ಟಿಲ್ಲ: ಪ್ರೂಫ್‌ ಕೇಳಿದ ಕಾಂಗ್ರೆಸ್‌ ನಾಯಕ

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸರ್ಕಾರ ಇನ್ನೂ ದಾಖಲೆ ಕೊಟ್ಟಿಲ್ಲ: ಪ್ರೂಫ್‌ ಕೇಳಿದ ಕಾಂಗ್ರೆಸ್‌ ನಾಯಕ

Published : Jan 24, 2023, 02:14 PM IST

ಸರ್ಜಿಕಲ್ ಸ್ಟ್ರೈಕ್ ಹೊರತಾಗಿ, 2019 ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ದಿಗ್ವಿಜಯ್ ಪ್ರಧಾನಿಯ ಪ್ರಶ್ನೆ ಮಾಡಿದ್ದಾರೆ.

2016ರಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸೋಮವಾರ ಪ್ರಶ್ನೆಗಳನ್ನು ಎತ್ತಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸರ್ಕಾರ ಇನ್ನೂ ದಾಖಲೆ ನೀಡಿಲ್ಲ ಎಂದು ಕೈ ನಾಯಕ ಜಮ್ಮುವಿನಲ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಸರ್ಜಿಕಲ್ ಸ್ಟ್ರೈಕ್ ಬಹಳ ಕೊಚ್ಚಿಕೊಳ್ಳುತ್ತದೆ, ಅಷ್ಟೆಲ್ಲಾ ಜನರನ್ನು ಕೊಂದಿದ್ದೇವೆ ಎಂದು ಹೇಳುತ್ತದೆ. ಆದರೆ, ಅದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಟೀಕೆ ಮಾಡಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಹೊರತಾಗಿ, 2019 ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ದಿಗ್ವಿಜಯ್ ಪ್ರಧಾನಿಯ ಪ್ರಶ್ನೆ ಮಾಡಿದ್ದಾರೆ. ಪುಲ್ವಾಮಾ ದಾಳಿಯ ಸಂದರ್ಭದಲ್ಲಿ, ಸಿಆರ್‌ಪಿಎಫ್ ಅಧಿಕಾರಿಗಳು ಸೈನಿಕರನ್ನು ವಿಮಾನದ ಮೂಲಕ ಸ್ಥಳಾಂತರಿಸಬೇಕೆಂದು ಹೇಳಿದ್ದರು. ಆದರೆ ಪ್ರಧಾನಿ ಇದಕ್ಕೆ ಒಪ್ಪಿರಲಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೇಳಿದ್ದಾರೆ. 2019 ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ದಾಳಿಯ ಹೊಣೆ ಹೊತ್ತುಕೊಂಡಿತ್ತು.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more