Left Right & Centre: ಏನಿದು  ಅಗ್ನಿಪಥ ಯೋಜನೆ? ಯಾಕಿಷ್ಟು ವಿರೋಧ?

Left Right & Centre: ಏನಿದು ಅಗ್ನಿಪಥ ಯೋಜನೆ? ಯಾಕಿಷ್ಟು ವಿರೋಧ?

Published : Jun 17, 2022, 09:40 PM IST

ಅಗ್ನಿಪಥ್ ಯೋಜನೆಯ ಬಗ್ಗೆ ದೇಶಾವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ಬಿಹಾರ, ರಾಜಸ್ಥಾನ, ಹರಿಯಾಣ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಸಾವರ್ಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡಿದ ಘಟನೆಯೂ ನಡೆದಿದೆ. ಅದರಲ್ಲೂ ಬಿಹಾರ ರಾಜ್ಯದಲ್ಲಿ ಪರಿಸ್ಥಿತಿ ಕೈಮೀರುವ ಹಂತದಲ್ಲಿದೆ.
 

ಬೆಂಗಳೂರು (ಜೂನ್ 17): ಕೆಲ ದಿನಗಳ ಹಿಂದೆ ಇನ್ನೇನು ಪಿಯುಸಿ ಮುಗಿಸುವ ಹುಡುಗರಿಗಾಗಿ ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಅಗ್ನಿಪಥ್ ಯೋಜನೆಯನ್ನು (Agnipath Scheme ) ಘೋಷಣೆ ಮಾಡಿತ್ತು. ಆದರೆ, ಇದರ ನೀತಿ ನಿಯಮಾವಳಿಗಳ ಕುರಿತಾಗಿ ಊಹಾಪೋಹಗಳನ್ನು ನಂಬಿದ ದೇಶದ ಯುವ ಜನತೆ ಪ್ರತಿಭಟನೆಗೆ ಮುಂದಾಗಿದೆ.

ಸತತ ಮೂರು ದಿನಗಳಿಂದ ಈ ಪ್ರತಿಭಟನೆಗಳು ನಡೆಯುತ್ತಿದ್ದು ಬಿಹಾರ (Bihar) ಅಕ್ಷರಶಃ ಕುದಿಕುದಿಯಾಗಿದೆ. ಉಳಿದಂತೆ ರಾಜಸ್ಥಾನ, ಹರಿಯಾಣ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡಿದ ಸಾಕಷ್ಟು ಘಟನೆಗಳು ನಡೆದಿವೆ. ಸಾಕಷ್ಟು ರೈಲುಗಳಿಗೆ ಬೆಂಕಿ ಹಚ್ಚಲಾಗಿದ್ದು, ಸ್ವತಃ ರೈಲ್ವೆ ಸಚಿವ, ಯಾವುದೇ ರೈಲುಗಳಿಗೆ ಹಾನಿ ಮಾಡದಂತೆ ಮನವಿ ಮಾಡಿದ್ದಾರೆ.

Agnipath Scheme ರೈಲ್ವೆ ಟಿಕೆಟ್ ಕಲೆಕ್ಟರ್‌ನಿಂದ 3 ಲಕ್ಷ ಲೂಟಿ ಮಾಡಿದ ಪ್ರತಿಭಟನಾಕಾರರು!

ಇದರ ನಡುವೆ ಭೂಸೇನೆ, ನೌಕಾಸೇನೆ ಹಾಗೂ ವಾಯುಸೇನೆಯ ಮುಖ್ಯಸ್ಥರು ಅಗ್ನಿಪಥ ಯೋಜನೆಯ ಅಡಿಯಲ್ಲಿ ಅಗ್ನಿವೀರರನ್ನು ಆಯಾಸೇನೆಗೆ ನೇಮಕ ಮಾಡುವ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಅದರಂತೆ ಜೂನ್ 24 ರಿಂದ ವಾಯುಸೇನೆಯ ಪ್ರಕ್ರಿಯೆ ಆರಂಭವಾಗಲಿದ್ದರೆ, ಇನ್ನೆರಡು ದಿನದಲ್ಲಿ ಭೂಸೇನೆಯ ನೋಟಿಫಿಕೇಶನ್ ಬರಲಿದೆ ಎಂದು ತಿಳಿಸಿದ್ದಾರೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more