Left Right & Centre: ಏನಿದು  ಅಗ್ನಿಪಥ ಯೋಜನೆ? ಯಾಕಿಷ್ಟು ವಿರೋಧ?

Left Right & Centre: ಏನಿದು ಅಗ್ನಿಪಥ ಯೋಜನೆ? ಯಾಕಿಷ್ಟು ವಿರೋಧ?

Published : Jun 17, 2022, 09:40 PM IST

ಅಗ್ನಿಪಥ್ ಯೋಜನೆಯ ಬಗ್ಗೆ ದೇಶಾವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ಬಿಹಾರ, ರಾಜಸ್ಥಾನ, ಹರಿಯಾಣ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಸಾವರ್ಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡಿದ ಘಟನೆಯೂ ನಡೆದಿದೆ. ಅದರಲ್ಲೂ ಬಿಹಾರ ರಾಜ್ಯದಲ್ಲಿ ಪರಿಸ್ಥಿತಿ ಕೈಮೀರುವ ಹಂತದಲ್ಲಿದೆ.
 

ಬೆಂಗಳೂರು (ಜೂನ್ 17): ಕೆಲ ದಿನಗಳ ಹಿಂದೆ ಇನ್ನೇನು ಪಿಯುಸಿ ಮುಗಿಸುವ ಹುಡುಗರಿಗಾಗಿ ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಅಗ್ನಿಪಥ್ ಯೋಜನೆಯನ್ನು (Agnipath Scheme ) ಘೋಷಣೆ ಮಾಡಿತ್ತು. ಆದರೆ, ಇದರ ನೀತಿ ನಿಯಮಾವಳಿಗಳ ಕುರಿತಾಗಿ ಊಹಾಪೋಹಗಳನ್ನು ನಂಬಿದ ದೇಶದ ಯುವ ಜನತೆ ಪ್ರತಿಭಟನೆಗೆ ಮುಂದಾಗಿದೆ.

ಸತತ ಮೂರು ದಿನಗಳಿಂದ ಈ ಪ್ರತಿಭಟನೆಗಳು ನಡೆಯುತ್ತಿದ್ದು ಬಿಹಾರ (Bihar) ಅಕ್ಷರಶಃ ಕುದಿಕುದಿಯಾಗಿದೆ. ಉಳಿದಂತೆ ರಾಜಸ್ಥಾನ, ಹರಿಯಾಣ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡಿದ ಸಾಕಷ್ಟು ಘಟನೆಗಳು ನಡೆದಿವೆ. ಸಾಕಷ್ಟು ರೈಲುಗಳಿಗೆ ಬೆಂಕಿ ಹಚ್ಚಲಾಗಿದ್ದು, ಸ್ವತಃ ರೈಲ್ವೆ ಸಚಿವ, ಯಾವುದೇ ರೈಲುಗಳಿಗೆ ಹಾನಿ ಮಾಡದಂತೆ ಮನವಿ ಮಾಡಿದ್ದಾರೆ.

Agnipath Scheme ರೈಲ್ವೆ ಟಿಕೆಟ್ ಕಲೆಕ್ಟರ್‌ನಿಂದ 3 ಲಕ್ಷ ಲೂಟಿ ಮಾಡಿದ ಪ್ರತಿಭಟನಾಕಾರರು!

ಇದರ ನಡುವೆ ಭೂಸೇನೆ, ನೌಕಾಸೇನೆ ಹಾಗೂ ವಾಯುಸೇನೆಯ ಮುಖ್ಯಸ್ಥರು ಅಗ್ನಿಪಥ ಯೋಜನೆಯ ಅಡಿಯಲ್ಲಿ ಅಗ್ನಿವೀರರನ್ನು ಆಯಾಸೇನೆಗೆ ನೇಮಕ ಮಾಡುವ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಅದರಂತೆ ಜೂನ್ 24 ರಿಂದ ವಾಯುಸೇನೆಯ ಪ್ರಕ್ರಿಯೆ ಆರಂಭವಾಗಲಿದ್ದರೆ, ಇನ್ನೆರಡು ದಿನದಲ್ಲಿ ಭೂಸೇನೆಯ ನೋಟಿಫಿಕೇಶನ್ ಬರಲಿದೆ ಎಂದು ತಿಳಿಸಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more