Left Right & Centre: ಏನಿದು  ಅಗ್ನಿಪಥ ಯೋಜನೆ? ಯಾಕಿಷ್ಟು ವಿರೋಧ?

Left Right & Centre: ಏನಿದು ಅಗ್ನಿಪಥ ಯೋಜನೆ? ಯಾಕಿಷ್ಟು ವಿರೋಧ?

Published : Jun 17, 2022, 09:40 PM IST

ಅಗ್ನಿಪಥ್ ಯೋಜನೆಯ ಬಗ್ಗೆ ದೇಶಾವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ಬಿಹಾರ, ರಾಜಸ್ಥಾನ, ಹರಿಯಾಣ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಸಾವರ್ಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡಿದ ಘಟನೆಯೂ ನಡೆದಿದೆ. ಅದರಲ್ಲೂ ಬಿಹಾರ ರಾಜ್ಯದಲ್ಲಿ ಪರಿಸ್ಥಿತಿ ಕೈಮೀರುವ ಹಂತದಲ್ಲಿದೆ.
 

ಬೆಂಗಳೂರು (ಜೂನ್ 17): ಕೆಲ ದಿನಗಳ ಹಿಂದೆ ಇನ್ನೇನು ಪಿಯುಸಿ ಮುಗಿಸುವ ಹುಡುಗರಿಗಾಗಿ ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಅಗ್ನಿಪಥ್ ಯೋಜನೆಯನ್ನು (Agnipath Scheme ) ಘೋಷಣೆ ಮಾಡಿತ್ತು. ಆದರೆ, ಇದರ ನೀತಿ ನಿಯಮಾವಳಿಗಳ ಕುರಿತಾಗಿ ಊಹಾಪೋಹಗಳನ್ನು ನಂಬಿದ ದೇಶದ ಯುವ ಜನತೆ ಪ್ರತಿಭಟನೆಗೆ ಮುಂದಾಗಿದೆ.

ಸತತ ಮೂರು ದಿನಗಳಿಂದ ಈ ಪ್ರತಿಭಟನೆಗಳು ನಡೆಯುತ್ತಿದ್ದು ಬಿಹಾರ (Bihar) ಅಕ್ಷರಶಃ ಕುದಿಕುದಿಯಾಗಿದೆ. ಉಳಿದಂತೆ ರಾಜಸ್ಥಾನ, ಹರಿಯಾಣ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡಿದ ಸಾಕಷ್ಟು ಘಟನೆಗಳು ನಡೆದಿವೆ. ಸಾಕಷ್ಟು ರೈಲುಗಳಿಗೆ ಬೆಂಕಿ ಹಚ್ಚಲಾಗಿದ್ದು, ಸ್ವತಃ ರೈಲ್ವೆ ಸಚಿವ, ಯಾವುದೇ ರೈಲುಗಳಿಗೆ ಹಾನಿ ಮಾಡದಂತೆ ಮನವಿ ಮಾಡಿದ್ದಾರೆ.

Agnipath Scheme ರೈಲ್ವೆ ಟಿಕೆಟ್ ಕಲೆಕ್ಟರ್‌ನಿಂದ 3 ಲಕ್ಷ ಲೂಟಿ ಮಾಡಿದ ಪ್ರತಿಭಟನಾಕಾರರು!

ಇದರ ನಡುವೆ ಭೂಸೇನೆ, ನೌಕಾಸೇನೆ ಹಾಗೂ ವಾಯುಸೇನೆಯ ಮುಖ್ಯಸ್ಥರು ಅಗ್ನಿಪಥ ಯೋಜನೆಯ ಅಡಿಯಲ್ಲಿ ಅಗ್ನಿವೀರರನ್ನು ಆಯಾಸೇನೆಗೆ ನೇಮಕ ಮಾಡುವ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಅದರಂತೆ ಜೂನ್ 24 ರಿಂದ ವಾಯುಸೇನೆಯ ಪ್ರಕ್ರಿಯೆ ಆರಂಭವಾಗಲಿದ್ದರೆ, ಇನ್ನೆರಡು ದಿನದಲ್ಲಿ ಭೂಸೇನೆಯ ನೋಟಿಫಿಕೇಶನ್ ಬರಲಿದೆ ಎಂದು ತಿಳಿಸಿದ್ದಾರೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more