ತಮಿಳುನಾಡಿನ 11 ಜಿಲ್ಲೆಗಳಲ್ಲಿ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ!

ತಮಿಳುನಾಡಿನ 11 ಜಿಲ್ಲೆಗಳಲ್ಲಿ ವರುಣನ ಆರ್ಭಟ, ಜನಜೀವನ ಅಸ್ತವ್ಯಸ್ತ!

Published : Nov 09, 2021, 11:17 AM IST

ತಮಿಳುನಾಡಿನ ಹನ್ನೊಂದು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ 2015ರ ಬಳಿಕ ಸುರಿದ ವರ್ಷಧಾರೆಯಿಂದ ಜನರು ತತ್ತರಿಸಿದ್ದಾರೆ. ಈವರೆಗೆ ಐವರು ಮೃತಪಟ್ಟಿದ್ದು, ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಚೆನ್ನೈ(ನ.09): ತಮಿಳುನಾಡಿನ (Tamil Nadu) ಹನ್ನೊಂದು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ 2015ರ ಬಳಿಕ ಸುರಿದ ವರ್ಷಧಾರೆಯಿಂದ (Rain) ಜನರು ತತ್ತರಿಸಿದ್ದಾರೆ. ಈವರೆಗೆ ಐವರು ಮೃತಪಟ್ಟಿದ್ದು, ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಚೆನ್ನೈನ ಬಹುತೇಕ ರಸ್ತೆಗಳು, ಅಂಡರ್‌ಪಾಸ್‌ಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ಜಲಾವೃತ ಆಡಂಬಾಕಂ ‍ಪೊಲೀಸ್ ಠಾಣೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಪರಿಹಾರ ಕಾರ್ಯಾಚರಣೆಗೆ ಚೆನ್ನೈ (Chennai) ಪಾಲಿಕೆಯು ಸುಮಾರು 23 ಸಾವಿರ ಸಿಬ್ಬಂದಿಯನ್ನು ನಿಯೋಜಿಸಿದೆ. ಮಳೆಯಿಂದ ಸಂತ್ರಸ್ತರಾಗಿರುವ 2 ಲಕ್ಷಕ್ಕೂ ಹೆಚ್ಚು ಜನರಿಗೆ ಆಹಾರವನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಚೆನ್ನೈನ 15 ವಲಯಗಳ ಮೇಲುಸ್ತುವಾರಿಗೆ 15 ಐಎಎಸ್ ಅಧಿಕಾರಿಗಳನ್ನು ಮುಖ್ಯಮಂತ್ರಿ ನಿಯೋಜಿಸಿದ್ದಾರೆ. 200 ವಿಶೇಷ ವೈದ್ಯಕೀಯ ಶಿಬಿರಗಳನ್ನು ತೆರೆಯಲಾಗಿದೆ. ತಗ್ಗು ಪ್ರದೇಶಗಳನ್ನು ಆವರಿಸಿರುವ ಕೆಸರು ಹಾಗೂ ಕಸವನ್ನು ತೆರವುಗೊಳಿಸಲು ಪಾಲಿಕೆ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more