LK Advani: ಬಿಜೆಪಿ ಭೀಷ್ಮ..ಅಡ್ವಾಣಿಗೆ ಭಾರತ ರತ್ನ: ರಾಜಕೀಯ ಗುರುವಿಗೆ ಶಿಷ್ಯ ಕೊಟ್ಟ ಅದ್ಭುತ ಕಾಣಿಕೆ..!

LK Advani: ಬಿಜೆಪಿ ಭೀಷ್ಮ..ಅಡ್ವಾಣಿಗೆ ಭಾರತ ರತ್ನ: ರಾಜಕೀಯ ಗುರುವಿಗೆ ಶಿಷ್ಯ ಕೊಟ್ಟ ಅದ್ಭುತ ಕಾಣಿಕೆ..!

Published : Feb 04, 2024, 09:41 AM ISTUpdated : Feb 04, 2024, 09:42 AM IST

ಗುರುವನ್ನು ವಿಶೇಷ ರೀತಿಯಲ್ಲಿ ಹೊಗಳಿದ ಪ್ರಧಾನಿ 
ರಾಮಮಂದಿರ ಲೋಕಾರ್ಪಣೆ ಬೆನ್ನಲ್ಲೇ ‘ಭಾರತ ರತ್ನ’
ರಾಮಮಂದಿರ ಹೋರಾಟದ ರೂವಾರಿಯಾಗಿದ್ದ ಅಡ್ವಾಣಿ 

ಬಿಜೆಪಿಯ ಭೀಷ್ಮ, ಹಿರಿಯ ರಾಜಕಾರಣಿ ಲಾಲ್ ಕೃಷ್ಣ ಅಡ್ವಾಣಿ(LK Advani) ಅವ್ರಿಗೆ ಭಾರತದಲ್ಲಿ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು(Bharat Ratna) ಕೇಂದ್ರ ಸರ್ಕಾರ ಘೋಷಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. 96 ವರ್ಷದ ಹಿರಿಯ ರಾಜಕಾರಣಿ ಎಲ್ ಕೆ ಅಡ್ವಾಣಿ ಅವರಿಗೆ ಲಭಿಸಿದ ಈ ಅತ್ಯುನ್ನತ ಗೌರವಕ್ಕಾಗಿ ಇಡೀ ಭಾರತ ದೇಶವೇ ಅಭಿನಂದಿಸಿದೆ.ರಾಮ ಮಂದಿ(Ram Mandir) ನಿರ್ಮಾಣಕ್ಕೆ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದ ಧೀಮಂತ. ಬಿಜೆಪಿ ಪಕ್ಷದ ಹಿರಿಯ ನಾಯಕ. ದೇಶದಲ್ಲಿ ಪಕ್ಷ ಅಷ್ಟೊಂದು ಚಾಲ್ತಿಯಲ್ಲಿ ಇಲ್ಲದೇ ಇದ್ದಾಗ, ಅಟಲ್ ಬಿಹಾರಿ ವಾಜಪೇಯಿ ಅವರೊಟ್ಟಿಗೆ ಜೋಡೆತ್ತಿನಂತೆ ನಿಂತು. ದೇಶಾದ್ಯಂತ ಸುತ್ತಿ ಪಕ್ಷ ಕಟ್ಟಿದ್ದ ಎದೆಗಾರ ಶ್ರೀ ಲಾಲ ಕೃಷ್ಣ ಅಡ್ವಾಣಿ ಈಗ ಭಾರತಕ್ಕೆ ರತ್ನವಾಗಿದ್ದಾರೆ. 

ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ಅವರು ಸೇವೆ ಅಪಾರವಾದದ್ದು. ದಶಕಗಳಿಂದ ಸಾರ್ವಜನಿಕ ಸೇವೆಯಲ್ಲಿ, ಅಚಲವಾದ ಬದ್ಧತೆ ಉಳ್ಳವರಾಗಿ ಗುರುತಿಸಿಕೊಂಡವರು ಅಡ್ವಾಣಿಯವರು. ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕುರಿತು ಎಲ್ ಕೆ ಅಡ್ವಾಣಿ ಅವರ ಕೊಡುಗೆ ಅಪಾರ. ಒಟ್ಟಾರೆ, ದೇಶದ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಹೆಜ್ಜೆ ಗುರುತು ಹೊಂದಿರುವ ಎಲ್ ಕೆ ಅಡ್ವಾನಿ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಘೋಷಣೆ ಮಾಡಿದೆ. ಅಡ್ವಾಣಿಯವರಿಗೆ ಸಂದ ಈ ಗೌರವವನ್ನು ದೇಶವೇ ಒಪ್ಪಿಕೊಂಡಿದೆ ಮತ್ತು ಮೆಚ್ಚಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಗುರುವಿಗೆ ಸಂದ ಈ ಗೌರವವನ್ನು ಅತ್ಯಂತ ಸಂತಸದಿಂದ ಹಂಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  Mandya Politics: ಸ್ವಾಮಿ Vs ಸ್ವಾಮಿ.. ಮತ್ತೊಂದು ರಣರಂಗಕ್ಕೆ ಸಾಕ್ಷಿಯಾಗುತ್ತಾ ಮಂಡ್ಯ..?

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more