ಕೋಲಾರದ ಕೋಲಾಹಲದಲ್ಲಿ ಮುನಿದ ಮುನಿಯಪ್ಪ, ಕಾಂಗ್ರೆಸ್‌ಗೆ ತಲೆನೋವು!

Mar 28, 2024, 10:58 PM IST

ಕೋಲಾರದಲ್ಲಿ ಕಾಂಗ್ರೆಸ್‌ಗೆ ಟಿಕೆಟ್ ಗೊಂದಲ ಮಂದುವರಿದಿದೆ. ಕೆಹೆಚ್ ಮುನಿಯಪ್ಪ ಅಳಿಯನಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ಶಾಸಕರ, ಪರಿಷತ್ ಸದಸ್ಯರು ರಾಜೀನಾಮೆಗೂ ಮುಂದಾಗಿದ್ದರು. ಹೀಗಾಗಿ ಟಿಕೆಟ್ ಬದಲಾವಣೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದೆ. ಆದರೆ ಅಭ್ಯರ್ಥಿ ಯಾರು ಅನ್ನೋದು ಇನ್ನೂ ಫೈನಲ್ ಆಗಿಲ್ಲ. ಇದೀಗ ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತದೆಯೋ ಅವರ ಪರ ಕೆಲಸ ಮಾಡುತ್ತೇವೆ ಅನ್ನೋ ಮಾತುಗಳು ಕಾಂಗ್ರೆಸ್ ನಾಯಕರಿಂದ ಬಂದಿದೆ. ಆದರೆ ಕೆಹೆಚ್ ಮುನಿಯಪ್ಪ ತಮ್ಮ ಪಟ್ಟು ಬಿಗಿಗೊಳಿಸಿದ್ದರೆ. ತಮ್ಮ ಅಳಿಯನಿಗೆ ಟಿಕೆಟ್‌ಗೆ ಪಟ್ಟು ಹಿಡಿದಿದ್ದಾರೆ. ಇದು ರಮೇಶ್ ಕುಮಾರ್ ಬಣದ ಆಕ್ರೋಶಕ್ಕೆ ಕಾರಣವಾಗಿದೆ.