News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

News Hour: ಸಂಸದೀಯ ಇತಿಹಾಸದಲ್ಲೇ ಅತಿದೊಡ್ಡ ಭದ್ರತಾ ಲೋಪ, ದಾಳಿಕೋರರಿಗೆ ಮೈಸೂರು ಲಿಂಕ್‌!

Published : Dec 13, 2023, 11:22 PM IST

ಇಂದಿಗೆ ಸಂಸತ್ ಮೇಲೆ ದಾಳಿ ನಡೆದು ಬರೋಬ್ಬರಿ ವರ್ಷ. ಬೆಳಗ್ಗೆ ಹುತಾತ್ಮರಿಗೆ ನಮನ ಸಲ್ಲಿಸಿ ಮೋದಿ, ಮಧ್ಯಪ್ರದೇಶ ಸಿಎಂ ಪದಗ್ರಹಣಕ್ಕೆ ಕಾರ್ಯಕ್ರಮಕ್ಕೆ ಹೋಗಿದ್ದರು. ಅಷ್ಟರೊಳಗೆ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ ನಡೆದಿದೆ. 
 

ಬೆಂಗಳೂರು (ಡಿ.13): ಸಂಸತ್‌ನ ಇತಿಹಾಸದಲ್ಲೇ ಕಂಡು ಕೇಳರಿಯದ ಭದ್ರತಾ ವೈಫಲ್ಯ ಬುಧವಾರ ನಡೆದಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದಾಗಲೇ ಇಬ್ಬರು ಆಗುಂತಕರು ದಾಳಿ ನಡೆಸಿದ್ದಾರೆ. ಗ್ಯಾಲರಿಯಿಂದ ಕಲಾಪಕ್ಕೆ ಧುಮಿಕಿ ದಾಳಿಕೋರರು ಆತಂಕ ಸೃಷ್ಟಿಸಿದ್ದರು.

ಸಂಸದರು ಕೂರುವ ಚೇರ್,ಟೇಬಲ್‌ಗಳ ಮೇಲೆ ದಾಳಿಕೋರ ಓಡಾಡಿದ್ದಾನೆ. ಕಲಾಪದಲ್ಲಿ ಸ್ಮೋಕ್ ಬಾಂಬ್ ಸ್ಪೋಟಿಸಿ ಆತಂಕಕ ಸೃಷ್ಟಿಸಿದ್ದ. ದಾಳಿಕೋರನನ್ನು ಸಂಸದರು ಮತ್ತು ಲೋಕಸಭಾ ಸಿಬ್ಬಂದಿ ಸುತ್ತುವರಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಲೋಕಸಭಾ ಗ್ಯಾಲರಿಯಲ್ಲಿದ್ದ ಮತ್ತೊಬ್ಬನಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾನೆ. ತಕ್ಷಣವೇ ದಾಳಿ ಮಾಡಿದ ಇಬ್ಬರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.

ಧಾರ್ಮಿಕ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ನಿಷೇಧ, ಮಧ್ಯಪ್ರದೇಶ ಸಿಎಂ ಆದೇಶ

ಹೊಸ ಸಂಸತ್ ಭವನದ ಹೊರಗೂ ಕೂಡ ಇಬ್ಬರು ಆತಂಕ ಸೃಷ್ಟಿಸಿದ್ದರು. ಸ್ಮೋಕ್ ಬಾಂಬ್ ಸಿಡಿಸಿ ಸಂಸತ್ ಮುಂದೆ ಆತಂಕ ಸೃಷ್ಟಿಸಿದ ಆರೋಪಿಗಳು ಸಂಸತ್‌ನ ಒಳಗೆ ಇಬ್ಬರು, ಹೊರಗೆ ಇಬ್ಬರು ಒಟ್ಟು ಒಟ್ಟು ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ. ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆ ಅಧಿಕಾರಿಗಳಿಂದ ಆರೋಪಿಗಳ ವಿಚಾರಣೆ. 3 ಗಂಟೆಗೂ ಹೆಚ್ಚು ಕಾಲ ಆರೋಪಿಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು ದಾಳಿಕೋರರ ಉದ್ದೇಶ ಏನು..? ಹಿನ್ನೆಲೆ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more