Ayodhya Ram Mandir: ಅಯೋಧ್ಯೆಯಲ್ಲಿ ಶುರು ರಾಮರಾಜ್ಯ.. ಹೇಗಿತ್ತು ರಾಮೋತ್ಸವ..?

Ayodhya Ram Mandir: ಅಯೋಧ್ಯೆಯಲ್ಲಿ ಶುರು ರಾಮರಾಜ್ಯ.. ಹೇಗಿತ್ತು ರಾಮೋತ್ಸವ..?

Published : Jan 23, 2024, 03:00 PM IST

500 ವರ್ಷಗಳ ಬಳಿಕ ಭವ್ಯ ಮಂದಿರಕ್ಕೆ ಮರಳಿದ ಶ್ರೀರಾಮ..!
ಸರಯೂ ನದಿ ತೀರದಲ್ಲಿ ವಿಜೃಂಭಣೆಯ ರಾಮ ಪಟ್ಟಾಭಿಷೇಕ..!
"ಮಂದಿರ್ ವಹೀ ಬನಾಯೇಂಗೇ" ಅಂದಿದ್ದರು ಎಲ್.ಕೆ ಅಡ್ವಾಣಿ..!

ಅದು ಶತಮಾನಗಳ ಕನಸು ನನಸಾದ ಅಮೃತಘಳಿಗೆ. ಶತಕೋಟಿ ಭಾರತೀಯರು ಪ್ರತೀಕ್ಷೆ ಮಾಡ್ತಿದ್ದದ್ದು ಇದೇ ಕ್ಷಣಕ್ಕಾಗಿ. ಕೋಟಿ ಕೋಟಿ ರಾಮಭಕ್ತರು ಚಾತಕ ಪಕ್ಷಿಗಳಂತೆ ಕಾಯ್ತಾ ಇದ್ದದ್ದು ಇದೇ ದಿನಕ್ಕಾಗಿ. ಆ ದಿನ ಬಂದೇ ಬಿಡ್ತು, ದೇವನಗರಿ ಅಯೋಧ್ಯೆಯಲ್ಲಿ(Ayodhya) ಶ್ರೀರಾಮ ಪಟ್ಟಾಭಿಷೇಕ ನಡೆದೇ ಬಿಡ್ತು. ನಮ್ಮ ರಾಮ ಮಂದಿರಕ್ಕೆ(Ram Mandir) ಮರಳಿ ಬಂದಿದ್ದಾನೆ. ನ ಭೂತೋ ನ ಭವಿಷ್ಯತಿ ಎನ್ನುವಂತೆ ರಾಮಜನ್ಮಭೂಮಿಯಲ್ಲಿ ತಲೆ ಎತ್ತಿ ನಿಂತಿರೋ ಮಂದಿರದಲ್ಲಿ ಶ್ರೀರಾಮಚಂದ್ರ ವಿರಾಜಮಾನನಾಗಿದ್ದಾನೆ. ರಾಮ ಮಂದಿರ ಕಟ್ಟಲು ಕಟಿ ಬದ್ಧರಾಗಿ ನಿಂತಿದ್ದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸೋಮವಾರ ಮಧ್ಯಾಹ್ನದ ಅಭಿಜಿನ್ ಲಗ್ನದಲ್ಲಿ ಶ್ರೀರಾಮನಿಗೆ ಪ್ರಾಣ ಪ್ರತಿಷ್ಠೆ ನಡೆದಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕವನ್ನು ನೋಡಲು ಕಾತರಿಂದ ಕಾಯ್ತಾ ಇದ್ದವರ ಸಂಖ್ಯೆ ಲೆಕ್ಕವಿಲ್ಲದಷ್ಟು. ಭಾರತದಲ್ಲಷ್ಟೇ ಅಲ್ಲ, ಸಪ್ತಸಾಗರದಾಚೆಯೂ ರಾಮಭಕ್ತರು ಆ ದಿನದ, ಆ ಕ್ಷಣದ ಪ್ರತೀಕ್ಷೆಯಲ್ಲಿದ್ರು. ಶ್ರೀರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆಯನ್ನು ಎಲ್ಲರೂ ಎದುರು ನೋಡ್ತಾ ಇದ್ರು. ಹಾಗ್ ನೋಡಿದ್ರೆ, ರಾಮ ಪಟ್ಟಾಭಿಷೇಕದ ಕಾರ್ಯಕ್ರಮಗಳು, ಧಾರ್ಮಿಕ ವಿಧಿ ವಿಧಾನಗಳು ರಾಮಜನ್ಮಭೂಮಿಯಲ್ಲಿ ಒಂದು ವಾರದ ಹಿಂದೆಯೇ ಶುರುವಾಗಿದ್ವು. ಆದ್ರೆ ಸೋಮವಾರ ನಡೆದ ರಾಮೋತ್ಸವದ ತೂಕವೇ ಬೇರೆ.

ಇದನ್ನೂ ವೀಕ್ಷಿಸಿ:  Raichur: ಚಾಡಿ ಹೇಳಿದ ಆರೋಪ: ಐದಾರು ಜನರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ !

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more