Ayodhya Ram Mandir: ಅಯೋಧ್ಯೆಯಲ್ಲಿ ಶುರು ರಾಮರಾಜ್ಯ.. ಹೇಗಿತ್ತು ರಾಮೋತ್ಸವ..?

Ayodhya Ram Mandir: ಅಯೋಧ್ಯೆಯಲ್ಲಿ ಶುರು ರಾಮರಾಜ್ಯ.. ಹೇಗಿತ್ತು ರಾಮೋತ್ಸವ..?

Published : Jan 23, 2024, 03:00 PM IST

500 ವರ್ಷಗಳ ಬಳಿಕ ಭವ್ಯ ಮಂದಿರಕ್ಕೆ ಮರಳಿದ ಶ್ರೀರಾಮ..!
ಸರಯೂ ನದಿ ತೀರದಲ್ಲಿ ವಿಜೃಂಭಣೆಯ ರಾಮ ಪಟ್ಟಾಭಿಷೇಕ..!
"ಮಂದಿರ್ ವಹೀ ಬನಾಯೇಂಗೇ" ಅಂದಿದ್ದರು ಎಲ್.ಕೆ ಅಡ್ವಾಣಿ..!

ಅದು ಶತಮಾನಗಳ ಕನಸು ನನಸಾದ ಅಮೃತಘಳಿಗೆ. ಶತಕೋಟಿ ಭಾರತೀಯರು ಪ್ರತೀಕ್ಷೆ ಮಾಡ್ತಿದ್ದದ್ದು ಇದೇ ಕ್ಷಣಕ್ಕಾಗಿ. ಕೋಟಿ ಕೋಟಿ ರಾಮಭಕ್ತರು ಚಾತಕ ಪಕ್ಷಿಗಳಂತೆ ಕಾಯ್ತಾ ಇದ್ದದ್ದು ಇದೇ ದಿನಕ್ಕಾಗಿ. ಆ ದಿನ ಬಂದೇ ಬಿಡ್ತು, ದೇವನಗರಿ ಅಯೋಧ್ಯೆಯಲ್ಲಿ(Ayodhya) ಶ್ರೀರಾಮ ಪಟ್ಟಾಭಿಷೇಕ ನಡೆದೇ ಬಿಡ್ತು. ನಮ್ಮ ರಾಮ ಮಂದಿರಕ್ಕೆ(Ram Mandir) ಮರಳಿ ಬಂದಿದ್ದಾನೆ. ನ ಭೂತೋ ನ ಭವಿಷ್ಯತಿ ಎನ್ನುವಂತೆ ರಾಮಜನ್ಮಭೂಮಿಯಲ್ಲಿ ತಲೆ ಎತ್ತಿ ನಿಂತಿರೋ ಮಂದಿರದಲ್ಲಿ ಶ್ರೀರಾಮಚಂದ್ರ ವಿರಾಜಮಾನನಾಗಿದ್ದಾನೆ. ರಾಮ ಮಂದಿರ ಕಟ್ಟಲು ಕಟಿ ಬದ್ಧರಾಗಿ ನಿಂತಿದ್ದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸೋಮವಾರ ಮಧ್ಯಾಹ್ನದ ಅಭಿಜಿನ್ ಲಗ್ನದಲ್ಲಿ ಶ್ರೀರಾಮನಿಗೆ ಪ್ರಾಣ ಪ್ರತಿಷ್ಠೆ ನಡೆದಿದೆ. ಅಯೋಧ್ಯೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕವನ್ನು ನೋಡಲು ಕಾತರಿಂದ ಕಾಯ್ತಾ ಇದ್ದವರ ಸಂಖ್ಯೆ ಲೆಕ್ಕವಿಲ್ಲದಷ್ಟು. ಭಾರತದಲ್ಲಷ್ಟೇ ಅಲ್ಲ, ಸಪ್ತಸಾಗರದಾಚೆಯೂ ರಾಮಭಕ್ತರು ಆ ದಿನದ, ಆ ಕ್ಷಣದ ಪ್ರತೀಕ್ಷೆಯಲ್ಲಿದ್ರು. ಶ್ರೀರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆಯನ್ನು ಎಲ್ಲರೂ ಎದುರು ನೋಡ್ತಾ ಇದ್ರು. ಹಾಗ್ ನೋಡಿದ್ರೆ, ರಾಮ ಪಟ್ಟಾಭಿಷೇಕದ ಕಾರ್ಯಕ್ರಮಗಳು, ಧಾರ್ಮಿಕ ವಿಧಿ ವಿಧಾನಗಳು ರಾಮಜನ್ಮಭೂಮಿಯಲ್ಲಿ ಒಂದು ವಾರದ ಹಿಂದೆಯೇ ಶುರುವಾಗಿದ್ವು. ಆದ್ರೆ ಸೋಮವಾರ ನಡೆದ ರಾಮೋತ್ಸವದ ತೂಕವೇ ಬೇರೆ.

ಇದನ್ನೂ ವೀಕ್ಷಿಸಿ:  Raichur: ಚಾಡಿ ಹೇಳಿದ ಆರೋಪ: ಐದಾರು ಜನರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ !

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more