ಕರ್ನಾಟಕಕ್ಕೆ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ? ಇದೇನಿದು ಹೊಸ ಕುತಂತ್ರ?

ಕರ್ನಾಟಕಕ್ಕೆ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ? ಇದೇನಿದು ಹೊಸ ಕುತಂತ್ರ?

Published : May 27, 2024, 03:09 PM ISTUpdated : May 27, 2024, 03:32 PM IST

ಮಹಾರಾಷ್ಟ್ರದಲ್ಲಿ ಕೆಲ ದಿನದಿಂದ ಭಾರೀ ಮಳೆ ಸುರಿಯುತ್ತಿದ್ದು, ರಾಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್‌ ಓವರ್ ಪ್ಲೋ ಆಗಿದೆ. ಕೊಲ್ಹಾಪುರ ಜಿಲ್ಲೆ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್ ಇದ್ದು, ಹರಿದು ಬರುತ್ತಿದ್ದ ನೀರು ಕಂಡು ರೈತರು ಖುಷಿಯಾಗಿದ್ದರು. ಆದರೆ ಈಗ ಅಲ್ಲಿನ ಸರ್ಕಾರ ನೀರನ್ನು ತಡೆ ಹಿಡಿದಿದೆ. 


ಕರ್ನಾಟಕ ಗಡಿಭಾಗದ ರಾಜ್ಯಗಳ ಜೊತೆಗೆ ಎಷ್ಟೇ ಚೆನ್ನಾಗಿರಲು ಪ್ರಯತ್ನಿಸಿದರೂ ಸಹ ಬೇರೆ ರಾಜ್ಯಗಳು ನಾಡಿಗೆ ವಿವಿಧ ರೀತಿಯಲ್ಲಿ ತೊಂದರೆ ಕೊಡುತ್ತಲೇ ಬರುತ್ತಿವೆ. ಈ ನಡಿವೆ ನೀರಿನ ವಿಚಾರದಲ್ಲೂ ಮಹಾರಾಷ್ಟ್ರ (Maharashtra) ಕ್ಯಾತೆ ತೆಗೆಯಲು ಮುಂದಾಗಿದೆ. ಹರಿದು ಬರುತ್ತಿದ್ದ ನೀರನ್ನು ಏಕನಾಥ ಶಿಂಧೆ ಸರ್ಕಾರ(Eknath Shinde Govt) ತಡೆದಿದೆ. ಈ ಮೂಲಕ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ ಎನ್ನುವ  ಪ್ರಶ್ನೆ ಕಾಡತೊಡಗಿದೆ. 

ಮಹಾರಾಷ್ಟ್ರದಲ್ಲಿ ಕೆಲ ದಿನದಿಂದ ಭಾರೀ ಮಳೆ ಸುರಿಯುತ್ತಿದ್ದು, ರಾಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್‌ (Rajapur Bridge cum Barrage)  ಓವರ್ ಪ್ಲೋ ಆಗಿದೆ. ಕೊಲ್ಹಾಪುರ ಜಿಲ್ಲೆ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್ ಇದ್ದು, ಹರಿದು ಬರುತ್ತಿದ್ದ ನೀರು ಕಂಡು ರೈತರು ಖುಷಿಯಾಗಿದ್ದರು. ಅದರಲ್ಲೂ ಬೆಳಗಾವಿ, ವಿಜಯಪುರ, ಬಾಗಲಕೋಟೆ ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ದುರಂತ ಎಂದರೆ ಕೃಷ್ಣಾ ನದಿ (Krishna river) ಮೂಲಕ ಹರಿದು ಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆದಿದೆ. ಅದಾಗ್ಯೂ ಕರ್ನಾಟಕ ರೈತರ (Karnataka Farmers) ಮೇಲೆಯೇ ಮಹಾರಾಷ್ಟ್ರ ಅಧಿಕಾರಿಗಳು ಗೂಬೆ ಕೂರಿಸಲು ಮುಂದಾಗಿದ್ದಾರೆ. ಬ್ಯಾರೇಜ್ ಗೇಟ್ ಓಪನ್ ಮಾಡಿ ನೀರು ಖದಿಯುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ಇದಕ್ಕಾಗಿ ನೀರು ತಡೆಯಲು ಬ್ರಿಡ್ಜ್ ಮೇಲೆ ಪೊಲೀಸರು, ನೀರಾವರಿ ಅಧಿಕಾರಿಗಳ ನೇಮಕ ಸಹ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more