ಕರ್ನಾಟಕಕ್ಕೆ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ? ಇದೇನಿದು ಹೊಸ ಕುತಂತ್ರ?

ಕರ್ನಾಟಕಕ್ಕೆ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ? ಇದೇನಿದು ಹೊಸ ಕುತಂತ್ರ?

Published : May 27, 2024, 03:09 PM ISTUpdated : May 27, 2024, 03:32 PM IST

ಮಹಾರಾಷ್ಟ್ರದಲ್ಲಿ ಕೆಲ ದಿನದಿಂದ ಭಾರೀ ಮಳೆ ಸುರಿಯುತ್ತಿದ್ದು, ರಾಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್‌ ಓವರ್ ಪ್ಲೋ ಆಗಿದೆ. ಕೊಲ್ಹಾಪುರ ಜಿಲ್ಲೆ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್ ಇದ್ದು, ಹರಿದು ಬರುತ್ತಿದ್ದ ನೀರು ಕಂಡು ರೈತರು ಖುಷಿಯಾಗಿದ್ದರು. ಆದರೆ ಈಗ ಅಲ್ಲಿನ ಸರ್ಕಾರ ನೀರನ್ನು ತಡೆ ಹಿಡಿದಿದೆ. 


ಕರ್ನಾಟಕ ಗಡಿಭಾಗದ ರಾಜ್ಯಗಳ ಜೊತೆಗೆ ಎಷ್ಟೇ ಚೆನ್ನಾಗಿರಲು ಪ್ರಯತ್ನಿಸಿದರೂ ಸಹ ಬೇರೆ ರಾಜ್ಯಗಳು ನಾಡಿಗೆ ವಿವಿಧ ರೀತಿಯಲ್ಲಿ ತೊಂದರೆ ಕೊಡುತ್ತಲೇ ಬರುತ್ತಿವೆ. ಈ ನಡಿವೆ ನೀರಿನ ವಿಚಾರದಲ್ಲೂ ಮಹಾರಾಷ್ಟ್ರ (Maharashtra) ಕ್ಯಾತೆ ತೆಗೆಯಲು ಮುಂದಾಗಿದೆ. ಹರಿದು ಬರುತ್ತಿದ್ದ ನೀರನ್ನು ಏಕನಾಥ ಶಿಂಧೆ ಸರ್ಕಾರ(Eknath Shinde Govt) ತಡೆದಿದೆ. ಈ ಮೂಲಕ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ ಎನ್ನುವ  ಪ್ರಶ್ನೆ ಕಾಡತೊಡಗಿದೆ. 

ಮಹಾರಾಷ್ಟ್ರದಲ್ಲಿ ಕೆಲ ದಿನದಿಂದ ಭಾರೀ ಮಳೆ ಸುರಿಯುತ್ತಿದ್ದು, ರಾಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್‌ (Rajapur Bridge cum Barrage)  ಓವರ್ ಪ್ಲೋ ಆಗಿದೆ. ಕೊಲ್ಹಾಪುರ ಜಿಲ್ಲೆ ಶಿರೋಳ ತಾಲೂಕಿನ ರಾಜಾಪುರ ಬ್ಯಾರೇಜ್ ಇದ್ದು, ಹರಿದು ಬರುತ್ತಿದ್ದ ನೀರು ಕಂಡು ರೈತರು ಖುಷಿಯಾಗಿದ್ದರು. ಅದರಲ್ಲೂ ಬೆಳಗಾವಿ, ವಿಜಯಪುರ, ಬಾಗಲಕೋಟೆ ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ದುರಂತ ಎಂದರೆ ಕೃಷ್ಣಾ ನದಿ (Krishna river) ಮೂಲಕ ಹರಿದು ಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆದಿದೆ. ಅದಾಗ್ಯೂ ಕರ್ನಾಟಕ ರೈತರ (Karnataka Farmers) ಮೇಲೆಯೇ ಮಹಾರಾಷ್ಟ್ರ ಅಧಿಕಾರಿಗಳು ಗೂಬೆ ಕೂರಿಸಲು ಮುಂದಾಗಿದ್ದಾರೆ. ಬ್ಯಾರೇಜ್ ಗೇಟ್ ಓಪನ್ ಮಾಡಿ ನೀರು ಖದಿಯುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ಇದಕ್ಕಾಗಿ ನೀರು ತಡೆಯಲು ಬ್ರಿಡ್ಜ್ ಮೇಲೆ ಪೊಲೀಸರು, ನೀರಾವರಿ ಅಧಿಕಾರಿಗಳ ನೇಮಕ ಸಹ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ‘ಕೈ’ಗೆ ಸಿಗುವ 7 ಸ್ಥಾನಗಳಿಗೆ 60ಕ್ಕೂ ಹೆಚ್ಚು ಆಕಾಂಕ್ಷಿಗಳು: ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ಸಿಎಂ, ಡಿಸಿಎಂ!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more