ಪಾಕಿಸ್ತಾನಕ್ಕೆ ಗೌರವ ನೀಡೋದನ್ನ ಭಾರತ ಕಲಿಯಬೇಕು ಅಂದ್ರಲ್ಲ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌

ಪಾಕಿಸ್ತಾನಕ್ಕೆ ಗೌರವ ನೀಡೋದನ್ನ ಭಾರತ ಕಲಿಯಬೇಕು ಅಂದ್ರಲ್ಲ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌

Published : May 10, 2024, 11:57 PM IST

ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ ನಾಯಕರು ಒಬ್ಬರ ನಂತರ ಒಬ್ಬರಂತೆ ವಿವಾದಿತ ಹೇಳಿಕೆಗಳನ್ನೇ ನೀಡ್ತಿದ್ದಾರೆ.. ಸ್ಯಾಮ್ ಪಿತ್ರೋಡಾ ಬಳಿಕ ಇದೀಗ ಕಾಂಗ್ರೆಸ್‌ನ  ಮಣಿಶಂಕರ್ ಅಯ್ಯರ್ ವಿವಾದ ಸೃಷ್ಟಿಸಿದ್ದು, ಬಿಜೆಪಿಗೆ ಚುನಾವಣಾ ಅಖಾಡದಲ್ಲಿ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.
 

ಬೆಂಗಳೂರು (ಮೇ.10): ಕಾಂಗ್ರೆಸ್​ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್, ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿ ಆಗ್ತಾರೆ.  2014ರಲ್ಲಿ ಮೋದಿ ಯಾವತ್ತೂ ಪ್ರಧಾನಿ ಆಗಲ್ಲ.. ಇಲ್ಲಿ ಬಂದು ಚಹಾ ವಿತರಣೆ ಮಾಡಲಿ ಅಂದಿದ್ದು ಇದೇ ಅಯ್ಯರ್​..ಇವರಿಗೆ ಪಾಕಿಸ್ತಾನದ ಮೇಲಿನ ಪ್ರೇಮ ಅಷ್ಟಿಷ್ಟಲ್ಲ. ಈಗಲೂ ಚುನಾವಣೆ ವೇಳೆ ಪಾಕಿಸ್ತಾನವನ್ನೂ ಹಾಡಿ ಹೊಗಳಿ ಅಯ್ಯರ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

‘ಪಾಕ್ ಜತೆ ಹುಡುಗಾಟ ಬೇಡ.. ಅವರ ಬಳಿ ಅಣುಬಾಂಬ್ ಇದೆ’ ಎಂದು ಅವರು ಹೇಳಿರುವ ಹಳೆಯ ವಿಡಿಯೋ ಚುನಾವಣೆಯ ಹೊತ್ತಲ್ಲಿ ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಸ್ಯಾಮ್​ ಪಿತ್ರೋಡಾ ಬಳಿಕ ಮಣಿಶಂಕರ್ ಅಯ್ಯರ್​ ಈಗ ವಿವಾದ ಸೃಷ್ಟಿಸಿದ್ದಾರೆ.

ಪಾಕ್ ಕೆಣಕಿದರೆ ನಮ್ಮ ಮೇಲೆ ಅಣುಬಾಂಬ್, ಬಿಜೆಪಿಗೆ ಎಚ್ಚರಿಕೆ ನೀಡಿ ವಿವಾದಕ್ಕೆ ಗುರಿಯಾದ ಮಣಿಶಂಕರ್!

ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ನಾವು ಅವರನ್ನು ಕೆಣಕಿದ್ರೆ ನಮ್ಮ ಮೇಲೆ ಅಣು ಬಾಂಬ್ ಹಾಕ್ತಾರೆ. ಭಾರತ ಸರ್ಕಾರ, ಪಾಕಿಸ್ತಾನ ಗೌರವಿಸದೇ ಹೋದರೆ ಅದಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಭಾರತದಲ್ಲೇ ಕುಳಿತು ಟಿವಿ ಸಂದರ್ಶನದಲ್ಲಿ ಎಚ್ಚರಿಕೆ ನೀಡೋ ಮೂಲಕ ಮತ್ತೊಮ್ಮೆ ತಾನು ಪಾಕ್ ಪ್ರೇಮಿ ಅನ್ನೋದನ್ನ ಜಗಜ್ಜಾಹಿರುಗೊಳಿಸಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more