ಕೇರಳ ಅಸೆಂಬ್ಲೀಲಿ ಕನ್ನಡಲ್ಲಿ ಶಾಸಕ ಅಶ್ರಫ್‌ ಪ್ರಮಾಣ!

ಕೇರಳ ಅಸೆಂಬ್ಲೀಲಿ ಕನ್ನಡಲ್ಲಿ ಶಾಸಕ ಅಶ್ರಫ್‌ ಪ್ರಮಾಣ!

Published : May 25, 2021, 08:58 AM ISTUpdated : May 25, 2021, 09:07 AM IST

ಗಡಿನಾಡು ಕಾಸರಗೋಡು ಜಿಲ್ಲೆ ಮಂಜೇಶ್ವರ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ.ಅಶ್ರಫ್‌ ಅವರು ಕೇರಳ ವಿಧಾನಸಭೆಯಲ್ಲಿ ಸೋಮವಾರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.

ಮಂಗಳೂರು(ಮೇ.25): ಗಡಿನಾಡು ಕಾಸರಗೋಡು ಜಿಲ್ಲೆ ಮಂಜೇಶ್ವರ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ.ಅಶ್ರಫ್‌ ಅವರು ಕೇರಳ ವಿಧಾನಸಭೆಯಲ್ಲಿ ಸೋಮವಾರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ. ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶ್ರಫ್‌, ನಿಕಟಸ್ಪರ್ಧಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್‌ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇನ್ನೊಂದು ಜನ್ಮವಿದ್ದರೆ ಕನ್ನಡಿಗನಾಗಿ ಹುಟ್ಟುತ್ತೇನೆಂದ ಎಸ್ಪಿಬಿ: ಅರ್ಚನಾ!

ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಕನ್ನಡದಲ್ಲೇ ಬಿಎ ಪದವಿ ಪಡೆದಿರುವ ಅಶ್ರಫ್‌ ಕಾಲೇಜು ವಿದ್ಯಾರ್ಥಿ ಯೂನಿಯನ್‌ನಲ್ಲಿ ಸಕ್ರಿಯವಾಗಿದ್ದರು. ವಿದ್ಯಾರ್ಥಿ ದೆಸೆಯಲ್ಲಿಯೇ ಕನ್ನಡ ಸಾಂಸ್ಕೃತಿಕ, ಸಾಹಿತ್ಯಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಮಾಣ ವಚನದಲ್ಲೂ ಕನ್ನಡದ ಭಾಷಾಭಿಮಾನ ಮೆರೆದಿರುವುದು ಗಮನಾರ್ಹ. ಅವರು ತುಳು, ಮಲಯಾಳಂ, ಉರ್ದು, ಇಂಗ್ಲಿಷ್‌ ಭಾಷೆಗಳನ್ನು ಸುಲಲಿತವಾಗಿ ಮಾತನಾಡಬಲ್ಲರು.

ವಾರಣಾಸಿಯಲ್ಲಿ ಕನ್ನಡದಲ್ಲಿ ಮೋದಿ ಮಾತು: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ!

ಗಡಿನಾಡು ಮಂಜೇಶ್ವರವನ್ನು ಕನ್ನಡ ಭಾಷಾ ಅಲ್ಪಸಂಖ್ಯಾತ ಪ್ರದೇಶ ಎಂಬುದಾಗಿ ಕೇರಳ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲೂ ಅಶ್ರಫ್‌ ಅವರ ನಡೆಯ ಬಗ್ಗೆ ಗಡಿನಾಡ ಕನ್ನಡಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮಂಜೇಶ್ವರದ ಹಿಂದಿನ ಶಾಸಕ ಕಮರುದ್ದೀನ್‌ ಕೂಡ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದರು. ಆ ಪರಂಪರೆಯನ್ನು ಇದೀಗ ಅಶ್ರಫ್‌ ಕೂಡ ಮುಂದುವರಿಸಿದ್ದಾರೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?