ಕೇರಳ ಅಸೆಂಬ್ಲೀಲಿ ಕನ್ನಡಲ್ಲಿ ಶಾಸಕ ಅಶ್ರಫ್‌ ಪ್ರಮಾಣ!

ಕೇರಳ ಅಸೆಂಬ್ಲೀಲಿ ಕನ್ನಡಲ್ಲಿ ಶಾಸಕ ಅಶ್ರಫ್‌ ಪ್ರಮಾಣ!

Published : May 25, 2021, 08:58 AM ISTUpdated : May 25, 2021, 09:07 AM IST

ಗಡಿನಾಡು ಕಾಸರಗೋಡು ಜಿಲ್ಲೆ ಮಂಜೇಶ್ವರ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ.ಅಶ್ರಫ್‌ ಅವರು ಕೇರಳ ವಿಧಾನಸಭೆಯಲ್ಲಿ ಸೋಮವಾರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.

ಮಂಗಳೂರು(ಮೇ.25): ಗಡಿನಾಡು ಕಾಸರಗೋಡು ಜಿಲ್ಲೆ ಮಂಜೇಶ್ವರ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ.ಅಶ್ರಫ್‌ ಅವರು ಕೇರಳ ವಿಧಾನಸಭೆಯಲ್ಲಿ ಸೋಮವಾರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ. ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶ್ರಫ್‌, ನಿಕಟಸ್ಪರ್ಧಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್‌ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇನ್ನೊಂದು ಜನ್ಮವಿದ್ದರೆ ಕನ್ನಡಿಗನಾಗಿ ಹುಟ್ಟುತ್ತೇನೆಂದ ಎಸ್ಪಿಬಿ: ಅರ್ಚನಾ!

ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಕನ್ನಡದಲ್ಲೇ ಬಿಎ ಪದವಿ ಪಡೆದಿರುವ ಅಶ್ರಫ್‌ ಕಾಲೇಜು ವಿದ್ಯಾರ್ಥಿ ಯೂನಿಯನ್‌ನಲ್ಲಿ ಸಕ್ರಿಯವಾಗಿದ್ದರು. ವಿದ್ಯಾರ್ಥಿ ದೆಸೆಯಲ್ಲಿಯೇ ಕನ್ನಡ ಸಾಂಸ್ಕೃತಿಕ, ಸಾಹಿತ್ಯಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಮಾಣ ವಚನದಲ್ಲೂ ಕನ್ನಡದ ಭಾಷಾಭಿಮಾನ ಮೆರೆದಿರುವುದು ಗಮನಾರ್ಹ. ಅವರು ತುಳು, ಮಲಯಾಳಂ, ಉರ್ದು, ಇಂಗ್ಲಿಷ್‌ ಭಾಷೆಗಳನ್ನು ಸುಲಲಿತವಾಗಿ ಮಾತನಾಡಬಲ್ಲರು.

ವಾರಣಾಸಿಯಲ್ಲಿ ಕನ್ನಡದಲ್ಲಿ ಮೋದಿ ಮಾತು: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ!

ಗಡಿನಾಡು ಮಂಜೇಶ್ವರವನ್ನು ಕನ್ನಡ ಭಾಷಾ ಅಲ್ಪಸಂಖ್ಯಾತ ಪ್ರದೇಶ ಎಂಬುದಾಗಿ ಕೇರಳ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲೂ ಅಶ್ರಫ್‌ ಅವರ ನಡೆಯ ಬಗ್ಗೆ ಗಡಿನಾಡ ಕನ್ನಡಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮಂಜೇಶ್ವರದ ಹಿಂದಿನ ಶಾಸಕ ಕಮರುದ್ದೀನ್‌ ಕೂಡ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದರು. ಆ ಪರಂಪರೆಯನ್ನು ಇದೀಗ ಅಶ್ರಫ್‌ ಕೂಡ ಮುಂದುವರಿಸಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!