ಕೇರಳ ಅಸೆಂಬ್ಲೀಲಿ ಕನ್ನಡಲ್ಲಿ ಶಾಸಕ ಅಶ್ರಫ್‌ ಪ್ರಮಾಣ!

ಕೇರಳ ಅಸೆಂಬ್ಲೀಲಿ ಕನ್ನಡಲ್ಲಿ ಶಾಸಕ ಅಶ್ರಫ್‌ ಪ್ರಮಾಣ!

Published : May 25, 2021, 08:58 AM ISTUpdated : May 25, 2021, 09:07 AM IST

ಗಡಿನಾಡು ಕಾಸರಗೋಡು ಜಿಲ್ಲೆ ಮಂಜೇಶ್ವರ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ.ಅಶ್ರಫ್‌ ಅವರು ಕೇರಳ ವಿಧಾನಸಭೆಯಲ್ಲಿ ಸೋಮವಾರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.

ಮಂಗಳೂರು(ಮೇ.25): ಗಡಿನಾಡು ಕಾಸರಗೋಡು ಜಿಲ್ಲೆ ಮಂಜೇಶ್ವರ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ.ಅಶ್ರಫ್‌ ಅವರು ಕೇರಳ ವಿಧಾನಸಭೆಯಲ್ಲಿ ಸೋಮವಾರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ. ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶ್ರಫ್‌, ನಿಕಟಸ್ಪರ್ಧಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್‌ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇನ್ನೊಂದು ಜನ್ಮವಿದ್ದರೆ ಕನ್ನಡಿಗನಾಗಿ ಹುಟ್ಟುತ್ತೇನೆಂದ ಎಸ್ಪಿಬಿ: ಅರ್ಚನಾ!

ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಕನ್ನಡದಲ್ಲೇ ಬಿಎ ಪದವಿ ಪಡೆದಿರುವ ಅಶ್ರಫ್‌ ಕಾಲೇಜು ವಿದ್ಯಾರ್ಥಿ ಯೂನಿಯನ್‌ನಲ್ಲಿ ಸಕ್ರಿಯವಾಗಿದ್ದರು. ವಿದ್ಯಾರ್ಥಿ ದೆಸೆಯಲ್ಲಿಯೇ ಕನ್ನಡ ಸಾಂಸ್ಕೃತಿಕ, ಸಾಹಿತ್ಯಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಮಾಣ ವಚನದಲ್ಲೂ ಕನ್ನಡದ ಭಾಷಾಭಿಮಾನ ಮೆರೆದಿರುವುದು ಗಮನಾರ್ಹ. ಅವರು ತುಳು, ಮಲಯಾಳಂ, ಉರ್ದು, ಇಂಗ್ಲಿಷ್‌ ಭಾಷೆಗಳನ್ನು ಸುಲಲಿತವಾಗಿ ಮಾತನಾಡಬಲ್ಲರು.

ವಾರಣಾಸಿಯಲ್ಲಿ ಕನ್ನಡದಲ್ಲಿ ಮೋದಿ ಮಾತು: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ!

ಗಡಿನಾಡು ಮಂಜೇಶ್ವರವನ್ನು ಕನ್ನಡ ಭಾಷಾ ಅಲ್ಪಸಂಖ್ಯಾತ ಪ್ರದೇಶ ಎಂಬುದಾಗಿ ಕೇರಳ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲೂ ಅಶ್ರಫ್‌ ಅವರ ನಡೆಯ ಬಗ್ಗೆ ಗಡಿನಾಡ ಕನ್ನಡಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮಂಜೇಶ್ವರದ ಹಿಂದಿನ ಶಾಸಕ ಕಮರುದ್ದೀನ್‌ ಕೂಡ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದರು. ಆ ಪರಂಪರೆಯನ್ನು ಇದೀಗ ಅಶ್ರಫ್‌ ಕೂಡ ಮುಂದುವರಿಸಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?