ಬಿಜೆಪಿ-ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿ ಗೊಂದಲ, ಮಹತ್ವದ ಕರೆ ಕೊಟ್ಟ ಮಾಯಾವತಿ

ಬಿಜೆಪಿ-ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿ ಗೊಂದಲ, ಮಹತ್ವದ ಕರೆ ಕೊಟ್ಟ ಮಾಯಾವತಿ

Published : Feb 26, 2022, 06:26 PM IST

ಉತ್ತರ ಪ್ರದೇಶ ರಾಜಕಾರಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಸಂದರ್ಶನವೊಂದರಲ್ಲಿ ಕೊಟ್ಟ ಹೇಳಿಕೆ, ಹಾಗೂ ಅದಕ್ಕೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಕೊಟ್ಟ ಪ್ರತಿಕ್ರಿಯೆ ಭಾರೀ ಚರ್ಚೆ ಹುಟ್ಟು ಹಾಕಿದೆ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹಾಗೂ ಬಿಎಸ್‌ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು  ಅಮಿತ್ ಶಾ ಸಂದರ್ಶನವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಮಾಯಾವತಿ, ಶಾ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ನುಡಿದಿದ್ದರು. ಈ ಬೆಳವಣಿಗೆಗಳು ಬಿಜೆಪಿ ಹಾಗೂ ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿಯ ಕಡೆ ಬೊಟ್ಟು ಮಾಡುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇವುಗಳ ಬಗ್ಗೆ ಮತ್ತೆ ಪ್ರತಿಕ್ರಿಯಿಸಿರುವ ಮಾಯಾವತಿ, ಆ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ.

ಉತ್ತರ ಪ್ರದೇಶ ರಾಜಕಾರಣದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಸಂದರ್ಶನವೊಂದರಲ್ಲಿ ಕೊಟ್ಟ ಹೇಳಿಕೆ, ಹಾಗೂ ಅದಕ್ಕೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಕೊಟ್ಟ ಪ್ರತಿಕ್ರಿಯೆ ಭಾರೀ ಚರ್ಚೆ ಹುಟ್ಟು ಹಾಕಿದೆ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹಾಗೂ ಬಿಎಸ್‌ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು  ಅಮಿತ್ ಶಾ ಸಂದರ್ಶನವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಮಾಯಾವತಿ, ಶಾ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ನುಡಿದಿದ್ದರು.

 ಈ ಬೆಳವಣಿಗೆಗಳು ಬಿಜೆಪಿ ಹಾಗೂ ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿಯ ಕಡೆ ಬೊಟ್ಟು ಮಾಡುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇವುಗಳ ಬಗ್ಗೆ ಮತ್ತೆ ಪ್ರತಿಕ್ರಿಯಿಸಿರುವ ಮಾಯಾವತಿ, ಆ ಊಹಾಪೋಹಗಳನ್ನು ಅಲ್ಲಗಳೆದಿದ್ದಾರೆ.

UP Election: ಏನಿದು ಬಿಜೆಪಿ+ಬೆಹನ್‌ಜೀ ಹೊಗಳಿಕೆ ರಾಜಕಾರಣ ರಹಸ್ಯ.?

ನಮ್ಮದು ರಾಷ್ಟ್ರೀಯ ಪಕ್ಷ. ಅದು  ಯಾರದ್ದೇ ಎ ಟಿಂ- ಬೀ ಟೀಂ ಅಲ್ಲ, ನಮ್ಮ ಬೆಂಬಲಿಗರು ಹಾಗೂ ಮತದಾರರನ್ನು ದಾರಿತಪ್ಪಿಸುವ ಪ್ರಯತ್ನ ಇದಾಗಿದೆ ಎಂದು ಬೆಹೆನ್‌ಜೀ ಕಿಡಿಕಾರಿದ್ದಾರೆ. ಇಂತಹ ಹೇಳಿಕೆಗಳು ಕಾಂಗ್ರೆಸ್‌, ಬಿಜೆಪಿ ಹಾಗೂ ಸಮಾಜವಾದಿ ಪಕ್ಷಗಳ ಜಾತಿವಾದಿ ಮನಸ್ಥಿತಿಯನ್ನು ತೋರಿಸುತ್ತೆ ಎಂದು ಮಾಯಾವತಿ  ವಾಗ್ದಾಳಿ ನಡೆಸಿದ್ದಾರೆ. ಇಂತಹ  ದ್ವಿಮುಖ ನೀತಿ ಹೊಂದಿರುವ ಪಕ್ಷಗಳಿಂದ ಜಾಗರೂಕರಾಗಿರುವಂತೆ ಮಾಯಾವತಿ ತಮ್ಮ ಬೆಂಬಲಿಗರು ಹಾಗೂ ಮತದಾರರಿಗೆ ಕರೆಕೊಟ್ಟಿದ್ದಾರೆ

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more