ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ತಿರುಗೇಟು ಕೊಟ್ಟ ಸಿಎಂ ಬೊಮ್ಮಾಯಿ

Jul 31, 2021, 5:19 PM IST

ನವದೆಹಲಿ, (ಜು.31): ಮೇಕೆದಾಟು ಡ್ಯಾಂ ನಿರ್ಮಾಣ ವಿರೋಧಿಸಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಘೋಷಿಸಿದ್ದಾರೆ. 

ಮೇಕೆದಾಟು ವಿಷಯದಲ್ಲಿ ತಮಿಳುನಾಡು ಪರ : ಅಣ್ಣಾಮಲೈ

ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಉಪವಾಸ ಬೇಕಾದ್ರೂ ಮಾಡಲಿ, ಊಟ ಬೇಕಾದ್ರು ಮಾಡಲಿ. ಮೇಕೆದಾಟು ಡ್ಯಾಂ ನಿರ್ಮಾಣ ಮಾಡಲು ನಮಗೆ ಹಕ್ಕಿದೆ. ನಾವು ಮೇಕೆದಾಟು ಅಣೆಕಟ್ಟು ನಿರ್ಮಿಸಿಯೇ ತೀರುತ್ತೇವೆ ಎಂದು  ಅಣ್ಣಾಮಲೈಗೆ ಟಾಂಗ್ ಕೊಟ್ಟರು.