ಜನರ ಬೆಂಬಲದಿಂದ ಎಲ್ಲವೂ ಸಾಧ್ಯ: ಲಸಿಕೆ ವಿಚಾರದಲ್ಲಿ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿದ ಭಾರತ!

ಜನರ ಬೆಂಬಲದಿಂದ ಎಲ್ಲವೂ ಸಾಧ್ಯ: ಲಸಿಕೆ ವಿಚಾರದಲ್ಲಿ ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡಿದ ಭಾರತ!

Published : Oct 22, 2021, 02:59 PM IST

ದೇಶದಲ್ಲಿ ನೂರು ಕೋಟಿ ಕೊರೋನಾ ಲಸಿಕಾಕರಣದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತೀಯರ ಒಗ್ಗಟ್ಟಿಗೆ ಭೇಷ್ ಎಂದಿದ್ದಾರೆ. ಹೌದು ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಕೊರೋನಾ ಸೋಂಕು ಆವರಿಸಿದ್ದ ಆರಂಭದಲ್ಲಿ ಭಾರತದಂತಹ ರಾಷ್ಟ್ರದಲ್ಲಿ ಈ ಸೋಂಕಿನ ವಿರುದ್ಧ ಹೋರಾಡುವುದು ಬಹಳ ಕಷ್ಟವಾಗಬಹುದೆಂಬ ಅಂದಾಜು ಮಾಡಲಾಗಿತ್ತು. ಭಾರತಕ್ಕೆ ಹಾಗೂ ಇಲ್ಲಿನ ಜನರಿಗೆ ಇಷ್ಟು ಸಂಯಮ, ಇಷ್ಟು ಶಿಸ್ತು ಇಲ್ಲಿ ಹೇಗೆ ಅಳವಡಿಸಲು ಸಾಧ್ಯ ಎಂಬ ಪ್ರಶ್ನೆಗಳನ್ನೂ ಕೇಳಲಾಗಿತ್ತು. ಆದರೆ ನಮ್ಮ ಪಾಲಿಗೆ ಪ್ರಜಾಪ್ರಭುತ್ವ ಎಂದರೆ 'ಸಬ್‌ ಕಾ ಸಾಥ್' ಎಂದಿದ್ದಾರೆ

ನವದೆಹಲಿ(ಅ.22): ದೇಶದಲ್ಲಿ ನೂರು ಕೋಟಿ ಕೊರೋನಾ ಲಸಿಕಾಕರಣದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭಾರತೀಯರ ಒಗ್ಗಟ್ಟಿಗೆ ಭೇಷ್ ಎಂದಿದ್ದಾರೆ. ಹೌದು ದೇಶವನ್ನುದ್ದೇಶಿಸಿ ಮಾತನಾಡಿದ ಪಿಎಂ ಕೊರೋನಾ ಸೋಂಕು ಆವರಿಸಿದ್ದ ಆರಂಭದಲ್ಲಿ ಭಾರತದಂತಹ ರಾಷ್ಟ್ರದಲ್ಲಿ ಈ ಸೋಂಕಿನ ವಿರುದ್ಧ ಹೋರಾಡುವುದು ಬಹಳ ಕಷ್ಟವಾಗಬಹುದೆಂಬ ಅಂದಾಜು ಮಾಡಲಾಗಿತ್ತು. ಭಾರತಕ್ಕೆ ಹಾಗೂ ಇಲ್ಲಿನ ಜನರಿಗೆ ಇಷ್ಟು ಸಂಯಮ, ಇಷ್ಟು ಶಿಸ್ತು ಇಲ್ಲಿ ಹೇಗೆ ಅಳವಡಿಸಲು ಸಾಧ್ಯ ಎಂಬ ಪ್ರಶ್ನೆಗಳನ್ನೂ ಕೇಳಲಾಗಿತ್ತು. ಆದರೆ ನಮ್ಮ ಪಾಲಿಗೆ ಪ್ರಜಾಪ್ರಭುತ್ವ ಎಂದರೆ 'ಸಬ್‌ ಕಾ ಸಾಥ್' ಎಂದಿದ್ದಾರೆ

ಹೀಗಾಗಿ ಎಲ್ಲರನ್ನೂ ಒಟ್ಟಿಗೆ ಸೇರಿಸಿ ದೇಶ ಎಲ್ಲರಿಗೂ ಲಸಿಕೆ, ಉಚಿತ ಲಸಿಕಾ ಅಭಿಯಾನ ಆರಂಭಿಸಿತು. ಬಡವರು, ಶ್ರೀಮಂತರು, ನಗರ, ಹಳ್ಳಿ ಹೀಗೆ ಎಲ್ಲರಿಗೂ ಲಸಿಕೆ ನಿಡಲಾಯಿತು. ರೋಗ ಯಾವುದೇ ಬೇದ ಭಾವ ಮಾಡುವುದಿಲ್ಲ ಎಂದ ಮೇಲೆ ಲಸಿಕೆಯಲ್ಲೂ ಈ ಯಾವುದೇ ಬೇದ ಭಾವ ಇರಬಾರದು ಎಂಬುವುದಷ್ಟೇ ನಮ್ಮ ಧ್ಯೇಯವಾಗಿತ್ತು. ಹೀಗಾಗಿ ಲಸಿಕೆ ಅಭಿಯಾನದಲ್ಲಿ ವಿಐಪಿ ಸಂಸ್ಕೃತಿ ಸೇರಬಾರದು ಎಂಬುವುದನ್ನು ಖಾತ್ರಿಪಡಿಸಿಕೊಂಡೆವು. ಯಾರು ಅದೆಷ್ಟೇ ದಿಒಡ್ಡ ಹುದ್ದೆಯಲ್ಲಿರಲಿ, ಎಷ್ಟೇ ದೊಡ್ಡ ಶ್ರೀಮಂತರಾಗಿರಲಿ ಅವರಿಗೆ ಲಸಿಕೆ ಸಾಮಾನ್ಯರಂತೇ ಕೊಟ್ಟಿದ್ದೇವೆ 

ನಮ್ಮ ದೇಶದ ಬಗ್ಗೆ ಇಲ್ಲಿ ಹೆಚ್ಚಿನ ಮಂದಿ ಲಸಿಕೆ ಹಾಕಿಸಲು ಬರುವುದಿಲ್ಲ ಎಂದೇ ಹೇಳಲಾಗಿತ್ತು. ವಿಶ್ವದ ಅನೇಕ ದೊಡ್ಡ ರಾಷ್ಟ್ರಗಳಲ್ಲಿ ಇಂದಿಗೂ ಲಸಿಕೆ ಹಾಕಿಸಲು ಇರುವ ಭಯ ದೊಡ್ಡ ಸವಾಲಾಗಿ ಪರಿಣಮಿಸಿದೆ. ಆದರೆ ಭಾರತದ ಜನರು ನೂರು ಕೋಟಿ ಲಸಿಕೆ ಪಡೆದು ಇಂತಹ ಜನರ ಬಾಯಿ ಮುಚ್ಚಿಸಿದ್ದಾರೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!